ಕೊಪ್ಪಳ : ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರದ ಕುರಿತಂತೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದ್ರು ಸೋಲ್ತಾರೆ ಎಂದು ಹೇಳಿದ್ದಾರೆ.

BIGG NEWS : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿ.ಕೆ. ಶಿವಕುಮಾರ್ ಭಯ ಕಾಡಲಿದೆ. ಡಿ.ಕೆ.ಶಿವಕುಮಾರ್ ಪ್ರಭಾವ ಇಲ್ಲದ ಕಡೆ ಸ್ಪರ್ಧಿಸಲು ಸಿದ್ದರಾಮಯ್ಯ ಹುಡುಕಾಟ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಸೋಲುತ್ತಾರೆ ಎಂದರು.

ಸಿದ್ದರಾಮಯ್ಯ ಕೋಲಾರ ಪ್ರವಾಸ ಚುನಾವಣೆ ಗಿಮಿಕ್, ರಾಜಕೀಯ ಪುನರ್ಜನ್ಮ ನೀಡಿದ ಬಾದಾಮಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಮೋಸ ಮಾಡುತ್ತಿದ್ದಾರೆ.ಸಿದ್ದರಾಮಯ್ಯರನ್ನು ಬಾದಾಮಿ ಕ್ಷೇತ್ರದ ಜನ ಕ್ಷಮಿಸಲ್ಲ. ಸಿದ್ದರಾಮಯ್ಯ ಕೊನೆಗೆ ವರುಣಾದಲ್ಲೇ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿಯಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದರು.

BIGG BREAKING NEWS : ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಫಿಕ್ಸ್ : ಕೋಲಾರದಿಂದ ಸ್ಪರ್ಧೆ ಕುರಿತಂತೆ ಸಿದ್ದು ಸುಳಿವು!

Share.
Exit mobile version