ಕಲಬುರಗಿ : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿವೇಕ” ಕಾರ್ಯಕ್ರಮದಡಿ ಶಾಲಾ ಕೊಠಡಿಗಳ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ ಸಿಎಂ ಬೊಮ್ಮಾಯಿ, ಜಾಗತೀಕರಣ ಫಲವಾಗಿ ವಿದೇಶದ ಮಕ್ಕಳೊಂದಿಗೆ ನಮ್ಮ ಮಕ್ಕಳು ಪೈಪೋಟಿ ನಡೆಸಬೇಕು. ಆ ನಿಟ್ಟಿನಲ್ಲಿ ಅವರ ಬುದ್ಧಿಶಕ್ತಿ ಹೆಚ್ಚಿಸಬೇಕಾಗಿದೆ. ಉತ್ತಮ ದೇಹ, ಮನಸ್ಥಿತಿ ಇದ್ದರೆ ಶಿಕ್ಷಣ ಪಡೆಯಲು ಸಾಧ್ಯ. ಇದಕ್ಕಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯವಾಗಿ ಜಾರಿಗೊಳಿಸಲಾಗುವುದು ಎಂದು ಸಿ.ಎಂ. ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIG NEWS: ಗುಜರಾತ್ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ʻಮೋದಿʼ ಫೋಟೋ ತೆಗೆದುಹಾಕಿ: ಚುನಾವಣಾ ಆಯೋಗಕ್ಕೆ ಎಎಪಿ ಮನವಿ
ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮುಂದಿನ ಆಗಸ್ಟ್ 15ರೊಳಗೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಒಳಗೊಂಡಂತೆ ಶೌಚಾಲಯಗಳನ್ನು ನಿರ್ಮಿಸಲಾಗುವುದು. ಇದಕ್ಕಾಗಿ 250 ಕೋಟಿ ರೂ. ಮೀಸಲಿಟ್ಟಿದೆ. ಕಲಬುರಗಿ ವಿಭಾಗದಲ್ಲಿ ತಲಾ 100 ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಹೊಸದಾಗಿ ಮಂಜೂರಾತಿ ನೀಡಲಾಗಿದೆ. 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಮತಿಮ ಹಂತದಲ್ಲಿದೆ. ಕಲ್ಯಾಣ ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣ ಮಾಡಲು ನಾವು ಬದ್ಧರಾಗಿದ್ದೇವೆ. ಕೇವಲ ಮಾತಿನಿಂದ ಎಲ್ಲವನ್ನೂ ಮಾಡಲಾಗುವುದಿಲ್ಲ. ಟಾರ್ಗೆಟ್ ಮತ್ತು ಟೈಂಲೈನ್ ಇಲ್ಲದೆ ಏನನ್ನೂ ಮಾಡಲು ಆಗುವುದಿಲ್ಲ. ಹಾಗಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.