ನವದೆಹಲಿ: ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಭಾಗವಾಗಿದ್ದ ಭಾರತದ ಇಬ್ಬರು ಗಡಿ ಭದ್ರತಾ ಪಡೆ ಸಿಬ್ಬಂದಿ ಮಂಗಳವಾರ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹತರಾಗಿದ್ದಾರೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಇಬ್ಬರು ವೀರ ಭಾರತೀಯ ಶಾಂತಿಪಾಲನಾ ಪಡೆಗಳನ್ನು ಕಳೆದುಕೊಂಡಿರುವುದಕ್ಕೆ ತೀವ್ರ ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಸೈನಿಕರು ಡಿಆರ್ ಕಾಂಗೋದಲ್ಲಿನ ವಿಶ್ವಸಂಸ್ಥೆಯ ಸ್ಥಿರೀಕರಣ ಮಿಷನ್ ಮೋನುಸ್ಕೋದ ಭಾಗವಾಗಿದ್ದರು ಎನ್ನಲಾಗಿದೆ. ಮೃತರಿಬ್ಬರೂ ಮುಖ್ಯಪೇದೆ ಹುದ್ದೆಯಲ್ಲಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share.
Exit mobile version