ನವದೆಹಲಿ: 2019ರಲ್ಲಿ ಶಬರಿಮಲೆ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದ10 -50 ವರ್ಷದೊಳಗಿನ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಬಿಂದು ಅಮ್ಮಿಣಿ ಅವರ ಮೇಲೆ ಬುಧವಾರ ಕೋಝಿಕ್ಕೋಡ್ ಬೀಚ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.
ಘಟನೆ ಹಿನ್ನೆಲೆ..
ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಝಿಕ್ಕೋಡ್ ಉತ್ತರ ಬೀಚ್ಗೆ ಆಗಮಿಸಿದಾಗ ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಲಿತ ಕಾರ್ಯಕರ್ತೆ ಆರೋಪಿಸಿದ್ದಾರೆ. ದಾಳಿಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರಲ್ಲಿ ಅಮ್ಮಿಣಿ ವ್ಯಕ್ತಿಯಿಂದ ಹಲ್ಲೆಗೊಳಗಾಗಿರುವುದನ್ನು ಕಾಣಬಹುದು.
TOI ವರದಿಯ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ವೆಲ್ಲಾಯಿಲ್ ಪೊಲೀಸರು ಐಪಿಸಿ ಸೆಕ್ಷನ್ 509 (ಮಹಿಳೆಯರ ನಮ್ರತೆಗೆ ಅವಮಾನ ಮಾಡುವ ಉದ್ದೇಶ) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ದಾಖಲಿಸಿದ್ದಾರೆ. ಈ ಘಟನೆ ನಡೆಯುವ ಸ್ವಲ್ಪ ಸಮಯದ ಮುಂಚೆ, ಕೆಲವು ವ್ಯಕ್ತಿಗಳುʻನೀವು ಶಬರಿಮಲೆಗೆ ಭೇಟಿ ನೀಡಿದ ಬಿಂದು ಅಮ್ಮಿಣಿಯೇʼ ಎಂದು ಕೇಳಿ ಅವರನ್ನು ಗೇಲಿ ಮಾಡಿದರು ಎಂದು ದೂರು ದಾಖಲಿಸಿದ್ದಾರೆ. ಅಮ್ಮಿಣಿ ಅವರ ದೂರಿನ ಆಧಾರದ ಮೇಲೆ ಘಟನೆಯ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದು ಕೋಝಿಕ್ಕೋಡ್ ಪೊಲೀಸರು ತಿಳಿಸಿದರು.
ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶವನ್ನು ತಡೆಯುವ ನಿಷೇಧವನ್ನು 2018 ರಲ್ಲಿ ಸುಪ್ರೀಂ ಕೋರ್ಟ್ ಅಂತ್ಯಗೊಳಿಸಿದ ನಂತರ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಿದ ಇಬ್ಬರು ಮಹಿಳೆಯರಲ್ಲಿ ಅಮ್ಮಿಣಿ ಒಬ್ಬರು. ಅಮ್ಮಿಣಿ ಮತ್ತು ಕನಕ ದುರ್ಗೆಯ ಪ್ರವೇಶವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗಳನ್ನು ಉಂಟುಮಾಡಿತು ಮತ್ತು ಇಬ್ಬರು ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ನಿರ್ದೇಶಿಸಿತು.
ಬಿಂದು ಅಮ್ಮಿಣಿ ಮೇಲೆ ನಡೆದ ಎರಡನೇ ಹಲ್ಲೆ ಪ್ರಕರಣ ಇದಾಗಿದೆ. ಇದಕ್ಕೂ ಮುನ್ನ ಬಸ್ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿ ಆಕೆಯ ಮುಖಕ್ಕೆ ಮೆಣಸು ಎರಚಿದ್ದರು.