ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದ ಆರೋಪಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಇಂದು ವಿಚಾರಣೆ ನಡೆಸಿತು. ನ್ಯಾಯಾಲಯದ ಮುಂದೆ ಸಿಐಡಿ ಪೊಲೀಸರು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡುವಂತೆ ಕೋರಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಿಐಡಿ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಬಂಧಿತ ಆರೋಪಿಗಳಾದಂತ ಪೊಲೀಸ್ ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್ ಪರ್ಟ್ ಸಂತೋಷ್ ಅವರನ್ನು ಜನವರಿ.31ರವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.
ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಹೈಕಮಾಂಡ್ ತೀರ್ಮಾನವನ್ನ ಸ್ವಾಗತಿಸುತ್ತೇನೆ : ಶಾಸಕ ಮಹೇಶ್ ಟೆಂಗಿನಕಾಯಿ