ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ಸಿಡಿದೆದ್ದು ಹೇಳಿಕೆ ನೀಡುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಬಿಜೆಪಿಯ ನಾಯಕರು ದೆಹಲಿಯ ಸೋಮಣ್ಣ ನಿವಾಸದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಗೆ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೀಡಲಾಗಿದ್ದು, ಅದಕ್ಕೆ 72 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಒಂದು ವೇಳೆ ನಿಗದಿತ ಕಾಲಮಿತಿಯಲ್ಲಿ ಉತ್ತರಿಸದೇ ಇದ್ದರೇ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.
ಅಂದಹಾಗೇ ದೆಹಲಿಯಿಂದ ಹೈದರಾಬಾದ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಯಾಣ ಬೆಳೆಸಿದ್ದಾರೆ. ಇದರ ನಡುವೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಹಿಂದೆಯೂ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು. ಅದಕ್ಕೆ ಅವರು ಕ್ಯಾರೆ ಎನ್ನದೇ ಬಿಜೆಪಿ ಪಕ್ಷದ ವಿರುದ್ಧ ವಾಕ್ ಸಮರ ಮುಂದುವರೆಸಿದ್ದರು.
Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು