Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ಹೈದರಾಬಾದ್ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ: ಶೋಧ | Bomb threats

08/07/2025 1:47 PM

BREAKING : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ ಮಾರಾಟ : ಬೆಚ್ಚಿ ಬಿದ್ದ ಜನ!

08/07/2025 1:42 PM

1970 ಮತ್ತು 2010ರ ನಡುವೆ ದೇಶದಲ್ಲಿ ಪ್ರವಾಹದ ಪ್ರಮಾಣ ಕಡಿಮೆಯಾಗಿದೆ: ಅಧ್ಯಯನ

08/07/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ಒಳಸಂಚು ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ
KARNATAKA

ಬಿಜೆಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ಒಳಸಂಚು ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ

By kannadanewsnow0505/12/2024 5:45 PM

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.

ಹಾಸನದಲ್ಲಿ ಗುರುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಕಳೆದ ನಾಲ್ಕು ದಶಕಗಳಿಂದ ಕಳಂಕರಹಿತ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಇಂತಹ ಮುಖ್ಯಮಂತ್ರಿಯವರಿಗೆ ಮುಡಾ ಹಗರಣದ ಹೆಸರಿನಲ್ಲಿ ಕಳಂಕ ತರಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಇದರ ಒಳಸಂಚೇನು ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದು ಕಿಡಿಕಾರಿದರು.

ಮಹಿಳೆಯರಿಗೆ ಜೆಡಿಎಸ್ ಅಗೌರವ

ಬಿಜಿಪಿ, ಜೆಡಿಎಸ್ ನವರಿಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಬಗ್ಗೆ ಮಾತಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಮುಖ್ಯಮಂತ್ರಿ ಸ್ಥಾನ ಎರಡುವರೆ ಸಾವಿರ ಕೋಟಿಗಳಿಗೆ ಮಾರಾಟವಾಗಿತ್ತೆಂದು ಅವರ ಪಕ್ಷದ ನಾಯಕರೇ ಆರೋಪ ಮಾಡಿದ್ದರು. ಇನ್ನು ಜೆಡಿಎಸ್ ನವರು ಮೊದಲು ಹೆಣ್ಣು ಮಕ್ಕಳಿಗೆ ಗೌರವ ಕೊಡುವುದನ್ನು ಕಲಿಯಲಿ. ಯಾರು ಹೆಣ್ಣು ಮಕ್ಕಳಿಗೆ ಅವಮಾನ ಮಾಡಿದ್ದಾರೆ: ಯಾರು ದುಶ್ಯಾಸನರು, ಎಷ್ಟು ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರ ಪಕ್ಷದ ಚಿನ್ಹೆ ತೆನೆ ಹೊತ್ತ ಮಹಿಳೆಗೇ ಅಗೌರವ ತೋರಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಎಂದೂ ಮಹಿಳೆಯರಿಗೆ ಅಗೌರವ ತೋರುವುದಿಲ್ಲ. ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ. ರಾಜ್ಯದಲ್ಲಿ 138 ಶಾಸಕ ಬಲದೊಂದಿಗೆ ಗಟ್ಟಿಯಾದ ಸರಕಾರವಿದೆ. ಅಲ್ಪ ಬಹುಮತವಿದ್ದಿದ್ದರೆ ಬಿಜೆಪಿ ಇಷ್ಟೊತ್ತಿಗಾಗಲೆ ಏನೆಲ್ಲ ಕಿತಾಪತಿ ಮಾಡಲು ಪ್ರಯತ್ನಿಸುತ್ತಿತ್ತು. ನಮ್ಮ ಅರ್ಧಕ್ಕಿಂತ ಕಡಿಮೆ ಸ್ಥಾನವಿದ್ದರೂ ನಮ್ಮ ಶಾಸಕರಿಗೆ ಆಮಿಷಗಳನ್ನೊಡ್ಡಿ ಈಗಲೂ ಆಪರೇಷನ್ ಮಾಡಲು ಹುನ್ನಾರ ನಡೆಸುತ್ತಿದೆ ಎಂದು ಸಚಿವರು ಆರೋಪಿಸಿದರು.

ವಿಪಕ್ಷದವರ ನಡೆ ಖಂಡಿಸಿ

ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರದಲ್ಲಿರಲಿ, ಕೇಂದ್ರದಲ್ಲಿ ಅಧಿಕಾರದಲ್ಲಿರಲಿ, ವ್ಯವಸ್ಥೆಯನ್ನು ಬಳಸಿಕೊಂಡು ವಿರೋಧ ಪಕ್ಷದವರಿಗೆ ಕಿರುಕುಳ ನೀಡುವುದೇ ದಂಧೆಯಾಗಿದೆ. ಈಗ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾದ ಸಿಬಿಐ, ಇಡಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಹಾಗಾಗಿ, ನಾವು ಒಗ್ಗಟ್ಟಿನಿಂದ ಸರಕಾರವನ್ನು ಸಮರ್ಥಿಸಿಕೊಳ್ಳುವ, ಬಿಜೆಪಿಯವರನ್ನು ಖಂಡಿಸುವ ಕೆಲಸ ಮಾಡಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಚಿವರು ಸಲಹೆ ನೀಡಿದರು.

ಬಿಜೆಪಿ ಒಳಜಗಳ ಹಾದಿರಂಪ ಬೀದಿರಂಪ

ಬಿಜೆಪಿಯವರು ನೂರು ಬಾರಿ ಸುಳ್ಳನ್ನು ಹೇಳಿ ಅದೇ ಸತ್ಯ ಎನ್ನುವಂತೆ ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ಮೊದಲ ಸುಳ್ಳಿನಲ್ಲೇ ಅದನ್ನು ಖಂಡಿಸುವ, ಸುಳ್ಳೆಂದು ಸಾಬೀತುಪಡಿಸುವ ಕೆಲಸವನ್ನು ನಾವು ಮಾಡಬೇಕಿದೆ. ಬಿಜೆಪಿಗೆ ಈಗ ರಾಜ್ಯದಲ್ಲಿ ಶಕ್ತಿ ಇಲ್ಲವಾಗಿದೆ, ಮಾತನಾಡಲು ಯಾವುದೇ ವಿಷಯಗಳು ಇಲ್ಲವಾಗಿದೆ.
ತನ್ನ ಒಳಜಗಳದಿಂದಾಗಿ ಜನರಿಗೆ, ಕಾರ್ಯಕರ್ತರಿಗೆ ಮುಖ ತೋರಿಸಲಾಗದಂತಹ ಸ್ಥಿತಿ ಬಿಜೆಪಿ ನಾಯಕರಿಗಾಗಿದೆ. ಆದರೂ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ನಾಯಕರು ಎಷ್ಟೇ ಕಿರುಕುಳ ಕೊಟ್ಟರೂ ಜಗ್ಗದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಾರಥ್ಯದ ನಮ್ಮ ಸರ್ಕಾರ ಇಡೀ ದೇಶಕ್ಕೆ ಮಾದರಿಯಾಗುವಂತ ಆಡಳಿತವನ್ನು ನೀಡುತ್ತಿದೆ. ಇಡೀ ರಾಜ್ಯದ ಜನರು ನಮ್ಮ ಪಕ್ಷದೊಂದಿಗಿದ್ದಾರೆ, ನಮ್ಮ ಸರಕಾರದೊಂದಿಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನುಡಿದಂತೆ ನಡೆದಿದ್ದೇವೆ

ನಮ್ಮ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ, ಚುನಾವಣೆಗೂ ಮುನ್ನ ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಹಾಗಿದೆ, ತ್ಯಾಗ, ಬಲಿದಾನಗಳಿಂದಲೇ ಕಟ್ಟಲ್ಪಟ್ಟಿರುವ ಪಕ್ಷ ನಮ್ಮದು. ಕೊಟ್ಟ ಮಾತಿನಿಂದ ಎಂದಿಗೂ ಹಿಂದೆ ಸರಿಯುವ ಪಕ್ಷ ನಮ್ಮದಲ್ಲ, ಬಿಜೆಪಿಯವರ ಹಾಗೆ ಸುಳ್ಳು ಹೇಳಿ ಎಂದೂ ಅಧಿಕಾರಕ್ಕೆ ಬಂದಿಲ್ಲ. ನಾವು ಕಾಂಗ್ರೆಸಿಗರು ಸದಾ ಬಡವರ ಪರವಾಗಿದ್ದೇವೆ. ನಮಗೆ ಬಡವರ, ದೀನ ದಲಿತರ, ಅಲ್ಪಸಂಖ್ಯಾತರ, ರೈತರ, ಕಾರ್ಮಿಕರ, ಮಹಿಳೆಯರ ಸಬಲೀಕರಣವೇ ಮುಖ್ಯವಾಗಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು, ಮಾಜಿ ಸಚಿವರು ಮತ್ತು ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಮುಖಂಡರು ಪಾಲ್ಗೊಂಡಿದ್ದರು.

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ ಮಾರಾಟ : ಬೆಚ್ಚಿ ಬಿದ್ದ ಜನ!

08/07/2025 1:42 PM1 Min Read

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

08/07/2025 1:34 PM1 Min Read

GOOD NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ.!

08/07/2025 1:26 PM1 Min Read
Recent News

Breaking: ಹೈದರಾಬಾದ್ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ: ಶೋಧ | Bomb threats

08/07/2025 1:47 PM

BREAKING : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ ಮಾರಾಟ : ಬೆಚ್ಚಿ ಬಿದ್ದ ಜನ!

08/07/2025 1:42 PM

1970 ಮತ್ತು 2010ರ ನಡುವೆ ದೇಶದಲ್ಲಿ ಪ್ರವಾಹದ ಪ್ರಮಾಣ ಕಡಿಮೆಯಾಗಿದೆ: ಅಧ್ಯಯನ

08/07/2025 1:36 PM

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

08/07/2025 1:34 PM
State News
KARNATAKA

BREAKING : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ‘ಪ್ಲಾಸ್ಟಿಕ್ ಅಕ್ಕಿ’ ಮಾರಾಟ : ಬೆಚ್ಚಿ ಬಿದ್ದ ಜನ!

By kannadanewsnow0508/07/2025 1:42 PM KARNATAKA 1 Min Read

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೆ ಪ್ಲಾಸ್ಟಿಕ್ ಅಕ್ಕಿ ಜನರ ಹೊಟ್ಟೆ ಸೇರುತ್ತಿದೆ. ಚಿಕ್ಕಮಗಳೂರಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಮಾರಾಟ…

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

08/07/2025 1:34 PM

GOOD NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ.!

08/07/2025 1:26 PM

BREAKING : ಮೈಸೂರಲ್ಲಿ ಭೀಕರ ಅಪಘಾತ : ಐಷರಾಮಿ ಬೈಕ್ ಡಿಕ್ಕಿಯಾಗಿ, ಝೋಮ್ಯಾಟೋ ಬಾಯ್ ಸೇರಿ ಇಬ್ಬರು ಸಾವು!

08/07/2025 1:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.