Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಗುಡ್ ನ್ಯೂಸ್ : `ಗುಪ್ತಚರ ಇಲಾಖೆ’ಯಲ್ಲಿ 4987 ಹುದ್ದೆಗಳಿಗೆ ಅರ್ಜಿ ಆಹ್ವಾನ| IB Recruitment 2025

27/07/2025 1:25 PM

ರಸ್ತೆಬದಿ ನಿಂತ ‘ಜಟಾಯು’ ನಂತಹ ಬೃಹತ್ ಪಕ್ಷಿ : ವಿಡಿಯೋ ವೈರಲ್ | WATCH VIDEO

27/07/2025 12:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: DGPಗೆ ಬಿಜೆಪಿ ನಿಯೋಗ ದೂರು
KARNATAKA

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: DGPಗೆ ಬಿಜೆಪಿ ನಿಯೋಗ ದೂರು

By kannadanewsnow0918/05/2024 3:56 PM

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಡಿ ಕೆಲಸ ಮಾಡುತ್ತಿದೆ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಬಂದಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ನೀಡುವ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇವತ್ತು ಮಹಿಳೆಯರು ವಾಕಿಂಗ್ ಹೋಗಲೂ ಭಯಪಡುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕ್ರಿಮಿನಲ್‍ಗಳು ಹತ್ಯೆ ಮಾಡಿ ಬೇರೆಡೆ ಓಡಿ ಹೋಗಿ ಇನ್ನೊಬ್ಬರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರು ಹಿಡಿದು ಕೊಡುವಂಥ ಪರಿಸ್ಥಿತಿ ಬಂದಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟ ಕುರಿತು ಪೊಲೀಸ್ ವರಿಷ್ಠರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಭಯಾನಕ ಅಪರಾಧಗಳ ಹೆಚ್ಚಳದ ಕುರಿತು ಗಮನ ಸೆಳೆಯಲಾಗಿದೆ. ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಆರೋಪಗಳಿದ್ದು, ಇದನ್ನು ತಪ್ಪಿಸಿ ಸ್ವತಂತ್ರವಾಗಿ ಕೆಲಸ ಮಾಡಲು ಕೋರಲಾಗಿದೆ ಎಂದು ವಿವರಿಸಿದರು.

ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಸಹಿ ಮಾಡಿದ ಮನವಿಪತ್ರವನ್ನು ಇದೇವೇಳೆ ಸಲ್ಲಿಸಲಾಯಿತು.

ಕರ್ನಾಟಕ- ಅಪರಾಧಗಳ ರಾಜ್ಯ?

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತು ಅಪರಾಧ ಪ್ರಮಾಣ ಹೆಚ್ಚಳದ ಕುರಿತು ಗಮನ ಸೆಳೆದು ತಕ್ಷಣ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ತಮಗೂ ತಿಳಿದಿದೆ. ಹಿಂದೆ ರಾಜ್ಯವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಅಪರಾಧಗಳನ್ನು ಕನಿಷ್ಠ ಪ್ರಮಾಣದಲ್ಲಿ ಇಡುವ ನಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ “ಅಪರಾಧಗಳ ರಾಜ್ಯ” ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ ಎಂದು ಮನವಿ ಹೇಳಿದೆ.

ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ, ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ 46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ. ಕರ್ನಾಟಕ ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಕಾನೂನು-ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇವೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿವರಿಸಲಾಗಿದೆ.

ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ, ಕುಸಿದು ಅರಾಜಕತೆ ಸೃಷ್ಟಿ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು, ಜನಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ. ಗನ್ ಹಿಡಿದು ಓಡಾಡುವ ವ್ಯಕ್ತಿ, ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಸ್ಥಿತಿ ರಾಜ್ಯದ್ದು. ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ. ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರೀಕರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್ ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ ಎಂಬುದನ್ನೂ ತಮ್ಮ ಅವಗಾಹನೆಗೆ ತರಲು ಬಯಸುತ್ತೇವೆ.

ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬುದು ಕಾಂಗ್ರೆಸ್ ಆಡಳಿತದಲ್ಲಿ ಪದೇಪದೇ ಸಾಬೀತಾಗಿದೆ. ಬೆಳಗಾವಿಯಲ್ಲಿ ನಡೆದ ಘಟನೆಯಂತೂ ಅತ್ಯಂತ ಅಮಾನವೀಯ. ಸಿದ್ದರಾಮಯ್ಯನವರು ಸೇರಿದಂತೆ ಸಂಪೂರ್ಣ ಆಡಳಿತ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಸುತ್ತಿದ್ದಾಗ 42 ವರ್ಷದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆ ನಡೆಸಿದ್ದರು. ಪೊಲೀಸ್ ಇಲಾಖೆ ಇಂಥ ದುರ್ಘಟನೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದರೂ ತಪ್ಪಾಗಲಾರದು.

ಕಾಂಗ್ರೆಸ್ ಸರಕಾರವು ಮುಸ್ಲಿಂ ಸಮುದಾಯದ ಅಪರಾಧಿಗಳು ಭಾಗಿಯಾದ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಮೀನಾಮೇಷ ಎಣಿಸುತ್ತದೆ. ಮುಸ್ಲಿಂ ವ್ಯಕ್ತಿಗಳಗುಂಪಿನಿಂದ ದಂಪತಿಗಳು ನೈತಿಕ ಪೋಲೀಸ್‍ಗಿರಿಗೆ ಬಲಿಯಾಗಿ ಈ ದಂಪತಿಗಳು ನ್ಯಾಯಕ್ಕಾಗಿ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿದ್ದರು ಆರಂಭದಲ್ಲಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಮುಚ್ಚಿಹಾಕಲು ಈ ಸರಕಾರ ಮುಂದಾಗಿತ್ತು, ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದಾಗಿ ಆಕ್ಷೇಪಿಸಿ ಹಿಂದೂ ಅಂಗಡಿಯವರೊಬ್ಬನ ಮೇಲೆ ಮುಸ್ಲಿಂ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಇದನ್ನು ಸಮರ್ಥನೆ ಮಾಡಿಕೊಳ್ಳೋದಕ್ಕೆ ಕಾಂಗ್ರೆಸ್ ಸರಕಾರ ಮುಂದಾಗಿತ್ತು. ಕಾಂಗ್ರೆಸ್ ಸರಕಾರವು ಹಿಂದೂಗಳನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡುತ್ತಿದೆ ಎಂಬುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಮನವಿ ತಿಳಿಸಿದೆ.

ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠರ ಹತ್ಯೆ ಪ್ರಕರಣ, ಅಂಬಿಕಾ ಎಂಬ ಯುವತಿಯ ಹತ್ಯೆ ಸೇರಿದಂತೆ ಅನೇಕ ಮಹಿಳೆಯರ ಹತ್ಯೆ ನಡೆದಿದೆ. ಅಲ್ಲದೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕೂಡಲೇ ನಿಷ್ಪಕ್ಷಪಾತ ಕ್ರಮ ಕೈಗೊಂಡಿಲ್ಲ ಎಂಬ ಜನಾಕ್ರೋಶಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಮಾಣ, ಕಾನೂನು- ಸುವ್ಯವಸ್ಥೆ ಕುಸಿತವನ್ನು ತಾವು ಗಮನಿಸಿ ಪೊಲೀಸ್ ಇಲಾಖೆಗೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾಗಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸುತ್ತದೆ. ತಾವು ಕೂಡಲೇ ಉನ್ನತಾಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನ ನೀಡಿ ಕಾನೂನು ಮತ್ತು ಸುವ್ಯವಸ್ಥೆಗೆ ರಾಜ್ಯ ಮಾದರಿ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇವೆ ಎಂದು ಮುಖಂಡರು ತಿಳಿಸಿದ್ದಾರೆ.

ಮೈಸೂರಲ್ಲಿ ದಂಪತಿಗಳಿಬ್ಬರು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಭಾರತದಲ್ಲಿ ನಾಲ್ವರಲ್ಲಿ ಒಬ್ಬರ ಮೇಲೆ ಸೈಬರ್​ ದಾಳಿ: ಆತಂಕ ಮೂಡಿಸಿದ ವರದಿ

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM1 Min Read

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪತಿಗೆ ಅನೈತಿಕ ಸಂಬಂಧ ಹಿನ್ನೆಲೆ ಪತ್ನಿ ಸೂಸೈಡ್!

27/07/2025 12:42 PM1 Min Read

BREAKING : ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

27/07/2025 12:42 PM1 Min Read
Recent News

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಗುಡ್ ನ್ಯೂಸ್ : `ಗುಪ್ತಚರ ಇಲಾಖೆ’ಯಲ್ಲಿ 4987 ಹುದ್ದೆಗಳಿಗೆ ಅರ್ಜಿ ಆಹ್ವಾನ| IB Recruitment 2025

27/07/2025 1:25 PM

ರಸ್ತೆಬದಿ ನಿಂತ ‘ಜಟಾಯು’ ನಂತಹ ಬೃಹತ್ ಪಕ್ಷಿ : ವಿಡಿಯೋ ವೈರಲ್ | WATCH VIDEO

27/07/2025 12:59 PM

ಉದ್ಯೋಗವಾರ್ತೆ : ‘IBPS’ 5208 ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ | IBPS Recruitment

27/07/2025 12:53 PM
State News
KARNATAKA

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

By kannadanewsnow5727/07/2025 1:27 PM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಭಾರೀ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತವಾಗಿದೆ.

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪತಿಗೆ ಅನೈತಿಕ ಸಂಬಂಧ ಹಿನ್ನೆಲೆ ಪತ್ನಿ ಸೂಸೈಡ್!

27/07/2025 12:42 PM

BREAKING : ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

27/07/2025 12:42 PM

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿದ ಹಿರಿಯೂರು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಅಭಿನಂದನ್

27/07/2025 12:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.