Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು
KARNATAKA

BREAKING: ಬಿಜೆಪಿ, RSS ಬಗ್ಗೆ ಟೀಕೆ; ಎಐಪಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ DGPಗೆ ದೂರು

By kannadanewsnow0907/04/2026 4:25 PM

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಘಟಕವು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಮಹಾನಿರ್ದೇಶಕರಿಗೆ (DGP) ದೂರು ನೀಡಿದೆ.

ದೂರಿನ ಪ್ರಮುಖ ಅಂಶಗಳು: ಬಿಜೆಪಿ ನಾಯಕರು ನೀಡಿರುವ ದೂರಿನಲ್ಲಿ ಖರ್ಗೆ ಅವರ ಭಾಷಣದ ತುಣುಕನ್ನು ಉಲ್ಲೇಖಿಸಲಾಗಿದ್ದು, ಈ ಕೆಳಗಿನ ಗಂಭೀರ ಆರೋಪಗಳನ್ನು ಮಾಡಲಾಗಿದೆ:

  • ಪ್ರಚೋದನಾಕಾರಿ ಹೇಳಿಕೆ: “ಕುರಾನ್‌ನಲ್ಲಿ ಬರೆದಿದೆ, ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಆರ್.ಎಸ್.ಎಸ್/ಬಿಜೆಪಿ ಕೂಡ ಅದೇ ರೀತಿಯ ವಿಷಸರ್ಪಗಳು. ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ” ಎಂದು ಹೇಳುವ ಮೂಲಕ ಮುಸ್ಲಿಮರನ್ನು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಎತ್ತಿಕಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

  • ಜೀವ ಬೆದರಿಕೆ: ಖರ್ಗೆ ಅವರ ಇಂತಹ ಬೇಜವಾಬ್ದಾರಿ ಹೇಳಿಕೆಯಿಂದ ದೇಶದಾದ್ಯಂತ ಇರುವ ಲಕ್ಷಾಂತರ ಬಿಜೆಪಿ ಮತ್ತು ಆರ್.ಎಸ್.ಎಸ್ ಸದಸ್ಯರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  • ಕಾನೂನು ಕ್ರಮಕ್ಕೆ ಒತ್ತಾಯ: ಈ ಹೇಳಿಕೆಯು ಸಮಾಜದಲ್ಲಿ ಧರ್ಮ ಮತ್ತು ಸಮುದಾಯಗಳ ನಡುವೆ ದ್ವೇಷ ಹರಡುವಂತಿದೆ. ಆದ್ದರಿಂದ ಹೊಸ ಕಾನೂನಿನ ಅನ್ವಯ (ಬಿಎನ್ಎಸ್) ಸೆಕ್ಷನ್ 196 (ಹಳೆಯ IPC 153A), ಸೆಕ್ಷನ್ 197 (ಹಳೆಯ IPC 153B), ಸೆಕ್ಷನ್ 299 ಮತ್ತು ಸೆಕ್ಷನ್ 353 ಅಡಿಯಲ್ಲಿ ತಕ್ಷಣವೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಉಲ್ಲೇಖ: ದ್ವೇಷ ಭಾಷಣದ (Hate Speech) ಪ್ರಕರಣಗಳಲ್ಲಿ ಪೊಲೀಸರು ಯಾವುದೇ ದೂರುದಾರರಿಗಾಗಿ ಕಾಯದೆ ತಾವಾಗಿಯೇ (Suo Motu) ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಬಿಜೆಪಿ ತನ್ನ ದೂರಿನಲ್ಲಿ ನೆನಪಿಸಿದೆ. ಅಲ್ಲದೆ, ಇಂತಹ ಹೇಳಿಕೆಗಳಿಂದ ಕಾರ್ಯಕರ್ತರ ಮೇಲೆ ದಾಳಿಯಾಗುವ ಆತಂಕವಿದ್ದು, ಕೂಡಲೇ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದೆ.

ಈ ನಿಯೋಗದಲ್ಲಿ ಶಾಸಕರಾದ ಎಸ್. ಮುನಿರಾಜು, ಸಿ.ಕೆ. ರಾಮಮೂರ್ತಿ, ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ವಕ್ತಾರ ಪ್ರಕಾಶ್ ಎಸ್. ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಭಾಸ್ಕರ್ ರಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಂದೇ ಭಾರತ್ ಊಟದಲ್ಲಿ ಜಿರಳೆ ಪತ್ತೆ: 10 ಲಕ್ಷ ದಂಡ, ಗುತ್ತಿಗೆ ರದ್ದು!

BREAKING: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅರೆಸ್ಟ್

Share. Facebook Twitter LinkedIn WhatsApp Email

Related Posts

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM2 Mins Read

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM1 Min Read

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM1 Min Read
Recent News

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

29/04/2026 9:47 PM

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

‘ದಿಗ್ಬಂಧನ ವಿಸ್ತರಣೆಗೂ ಮುನ್ನ ಒಪ್ಪಂದಕ್ಕೆ ಸಹಿ ಹಾಕಿ’: ಇರಾನ್‌ಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!

29/04/2026 9:08 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM
State News
KARNATAKA

ಕೇಳಿಸದ ಕಿವಿಗೆ ‘ಟೀಮ್ ಈಶ್ವರ್ ಮಲ್ಪೆ’ ಆಸರೆ: ಮೇ.12ರಂದು ಸಾಗರದಲ್ಲಿ ಉಚಿತ ಶ್ರವಣ ತಪಾಸಣಾ ಶಿಬಿರ!

By kannadanewsnow0929/04/2026 9:47 PM KARNATAKA 2 Mins Read

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ…

BREAKING: ಬೆಂಗಳೂರಲ್ಲಿ ರಣ ಮಳೆಗೆ ಮತ್ತೊಂದು ಬಲಿ: ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು

29/04/2026 9:23 PM

30 ಕೋಟಿ ವೆಚ್ಚದಲ್ಲಿ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ: ಮದ್ದೂರು ಶಾಸಕ ಕೆ.ಎಂ.ಉದಯ್

29/04/2026 9:07 PM

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಕಾಂಪೌಂಡ್ ಕುಸಿದು 7 ಮಂದಿ ಬಲಿ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

29/04/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.