ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಅವಹೇಳನಕಾರಿಯಾಗಿ ಜಾಹೀರಾತು ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು ಈ ಕುರಿತು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.

ಕನ್ನಡ ಮತ್ತು ಇಂಗ್ಲಿಷ್ ದೈನಂದಿನ ಪತ್ರಿಕೆಗಳಲ್ಲಿ ಮಾನಹಾನಿ ಮಾಡುವ ಜಾಹೀರಾತನ್ನು ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ತಕ್ಷಣವೇ ಎಫ್‍ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕೂಡಲೇ ಸೂಕ್ತ ನಿರ್ದೇಶನ ಕೊಡುವಂತೆ ಮನವಿ ಆಗ್ರಹಿಸಿದೆ.

ಮನವಿ ಸಲ್ಲಿಸುವ ನಿಯೋಗದಲ್ಲಿ ಶಾಸಕ ರವಿ ಸುಬ್ರಹ್ಮಣ್ಯ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪಕ್ಷದ ಪ್ರಮುಖ ನಾಯಕರು ಇದ್ದರು.

BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ರಾಜ್ಯ ಮಹಿಳಾ ಆಯೋಗದ ನೋಟಿಸ್ ಗೆ ಹೈಕೋರ್ಟ್ ತಡೆ

ಹೆಣದ ಮೇಲೆ ಯಾರು ರಾಜಕಾರಣ ಮಾಡಬಾರದು, ನೇಹಾ ಹಂತಕನಿಗೆ ಗಲ್ಲು ಶಿಕ್ಷೆಯಾಗಲಿ : ಶಾಸಕ ಪ್ರಸಾದ್ ಅಬ್ಬಯ್ಯ

Share.
Exit mobile version