ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರಿ ಚರ್ಚೆಯಾಗುತ್ತಿದೆ. ಸಿಎಂ ಸ್ಥಾನ್ಕಾಗಿ ಕಾಂಗ್ರೆಸ್‌ ನಾಯಕರ ಪೈಪೋಟಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಫೋನ್‌ ಕರೆ ಬಂದಿದೆ. ಈ ವೇಳೆ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.

BIGG NEWS: ನಟ ನಾಗಚೈತನ್ಯ ಈಗ ಸಮಂತಾ ಭೇಟಿಯಾದರೆ ಏನು ಮಾಡ್ತಾರಂತೆ ಗೊತ್ತಾ?

 

ಮುಖ್ಯಮಂತ್ರಿಗಳ ಆಪ್ತ ಮೂಲಗಳ ಪ್ರಕಾರ, ಬಿಜೆಪಿ ಹೈಕಮಾಂಡ್‌ನಿಂದ ಸಿಎಂ ಬಸವರಾಜ ಬೊಮ್ಮಾಯಿ‌ ಅವರಿಗೆ ಮಂಗಳವಾರ ರಾತ್ರಿ ದೂರವಾಣಿ ಕರೆ ಬಂದಿದೆ. ಸಿಎಂ ಬದಲಾವಣೆ ಅನ್ನುವ ವದಂತಿ ಎಲ್ಲಿಂದ ಹಬ್ಬುತ್ತಿದೆ ಎಂಬ ಪ್ರಶ್ನೆಯನ್ನು ಹೈಕಮಾಂಡ್ ಕೇಳಿದೆ ಎಂದೂ ತಿಳಿದು ಬಂದಿದೆ.
ವದಂತಿಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಯಾವ ಕಾರಣಕ್ಕೂ ನಿಮ್ಮನ್ನು ಬದಲಾಯಿಸುವುದಿಲ್ಲ ಎಂಬ ಭರವಸೆಯನ್ನು ಹೈಕಮಾಂಡ್ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

BIGG NEWS: ನಟ ನಾಗಚೈತನ್ಯ ಈಗ ಸಮಂತಾ ಭೇಟಿಯಾದರೆ ಏನು ಮಾಡ್ತಾರಂತೆ ಗೊತ್ತಾ?

 

ನಿಮ್ಮ ನೇತೃತ್ವದಲ್ಲೇ ಮುಂದಿನ ಚುನಾವಣೆ ಎಂದು ಈಗಾಗಲೇ ಬಹಿರಂಗವಾಗಿ ಹೇಳಿದ್ದೇವೆ. ನಿಮ್ಮ ಕೆಲಸದ ಬಗ್ಗೆ ನಮ್ಮ ಮೆಚ್ಚುಗೆ ಇದೆ.‌ ಹಾಗಾಗಿ ನಿಮ್ಮ ಪಾಡಿಗೆ ನೀವು ಕೆಲಸ ಮಾಡಿಕೊಂಡು ಹೋಗಿ ಎಂದು ಹೈಕಮಾಂಡ್ ತಿಳಿಸಿದೆ.

Share.
Exit mobile version