Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ-ಜೆಡಿಎಸ್‌ ನಿಂದ ಅಹೋರಾತ್ರಿ ಧರಣಿ : ವಿಧಾನಸಭೆಯಲ್ಲಿ ಶ್ರೀರಾಮನ ಭಜನೆ ಮಾಡಿ ರಾತ್ರಿ ಕಳೆದ ಶಾಸಕರು!
KARNATAKA

ಬಿಜೆಪಿ-ಜೆಡಿಎಸ್‌ ನಿಂದ ಅಹೋರಾತ್ರಿ ಧರಣಿ : ವಿಧಾನಸಭೆಯಲ್ಲಿ ಶ್ರೀರಾಮನ ಭಜನೆ ಮಾಡಿ ರಾತ್ರಿ ಕಳೆದ ಶಾಸಕರು!

By kannadanewsnow5725/07/2024 6:20 AM

ಬೆಂಗಳೂರು : ಸದನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದ ಕಾರಣ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ತಡರಾತ್ರಿವರೆಗೆ ಶ್ರೀರಾಮನ ಬಜೆನೆ ಮಾಡಿದ ಬಿಜೆಪಿ-ಜೆಡಿಎಸ್‌ ನ ಶಾಸಕರು ಬಳಿಕ ಅಲ್ಲೇ ಮಲಗಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ.

•ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ಹಣ ದರೋಡೆ ಮಾಡಿ ಈಗಾಗಲೇ ‘ಇಡಿ ಇಕ್ಕಳ’ಕ್ಕೆ ಸಿಲುಕಿ ಶಾಸಕ ಬಿ ನಾಗೇಂದ್ರ ಜೈಲು ಸೇರಿರುವುದರ ಹಿಂದೆಯೇ ಸರತಿ ಸಾಲಿನಲ್ಲಿ ನಿಂತು ಜೈಲಿನ ಬಾಗಿಲು ತಟ್ಟುತ್ತಿದ್ದೀರಿ.

•ವಿತ್ತ ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಹಗರಣದ ಬಗ್ಗೆ ತಮಗೇನೂ ತಿಳಿದಿಲ್ಲ’ ಗುಳುಂ’ಆಗಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಗಳ ರಕ್ಷಣೆಯ ಹೊಣೆ ನನ್ನದಲ್ಲ ಎಂದು ಹೇಳುತ್ತಿರುವುದು ಬರೀ ನೈತಿಕತೆಯ ಪ್ರಶ್ನೆ ಅಲ್ಲವೇ ಅಲ್ಲ. ಜವಾಬ್ದಾರಿಯಿಂದ ನುಣುಕಿಕೊಳ್ಳುವ ಕುತಂತ್ರದ ಯೋಚನೆಯಾಗಿದೆ, ಇದಕ್ಕೆ ತನಿಖೆಯ ಹಾದಿಯಲ್ಲಿ ನಿಮಗೆ ತಕ್ಕ ಉತ್ತರ ದೊರಕಲಿದೆ.

•ಪರಿಶಿಷ್ಟ ಜಾತಿಗಳ ಕಲ್ಯಾಣ ಕಾರ್ಯಕ್ಕೆ ಮಾತ್ರ ಬಳಸಬೇಕಿದ್ದ ಸಾವಿರಾರು ಕೋಟಿ ರೂಪಾಯಿಗಳನ್ನು ಅನ್ಯ ಕಾರ್ಯಗಳಿಗೆ ಬಳಸಿ ನೀವು ಮತ್ತು ನಿಮ್ಮ ಸರ್ಕಾರ ಪರಿಶಿಷ್ಟರ ದ್ರೋಹಿಯಾಗಿದ್ದೀರಿ, ನಿಮಗೆ ಪರಿಶಿಷ್ಟ ಸಮುದಾಯಗಳೇ ಪಾಠ ಕಲಿಸಲಿವೆ.

•ನಿಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಸೂರು ಹೊಂದುವ ಜೀವಮಾನದ ಕನಸನ್ನು ನನಸು ಮಾಡಿಕೊಳ್ಳಲು ದಶಕಗಳಿಂದ ಕಾದು ಕುಳಿತಿದ್ದ ಲಕ್ಷಕ್ಕೂ ಹೆಚ್ಚಿನ ಅರ್ಜಿದಾರ ವಸತಿ ರಹಿತರು ಹಾಗೂ ಬಡವರಿಗೆ ದಕ್ಕಬೇಕಾದ ಮೂಡಾ ನಿವೇಶನಗಳನ್ನು ಬಲಾಢ್ಯರು, ನೆಲಬಾಕರು, ಪ್ರಭಾವಿಗಳಿಗೆ ನೀತಿ ನಿಯಮಗಳನ್ನು ಮೀರಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 5000ಕ್ಕೂ ಹೆಚ್ಚು ನಿವೇಶನಗಳನ್ನು ಧಾರೆ ಎರೆದು ಕೊಟ್ಟಿರುವ ನಿವೇಶನ ಅಕ್ರಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನೀವು ಏಕೆ ಹಿಂದೇಟು ಹಾಕುತ್ತಿದ್ದೀರಿ ?

•ಏಕೆಂದರೆ ಈ ಹಗರಣದ ಪಿತಾಮಹ ನೀವೇ ಆಗಿದ್ದೀರಿ, ನಿಮ್ಮ ಪತ್ನಿಯವರ ಹೆಸರಿನಲ್ಲಿ ಬೆಳೆಬಾಳುವ 14 ನಿವೇಶನಗಳನ್ನು ನಿಯಮ ಬಾಹಿರವಾಗಿ ಪಡೆದುಕೊಂಡು ನೈಜ ಫಲಾನು ಭವಿ ಪರಿಶಿಷ್ಟ ಕುಟುಂಬವನ್ನು ವಂಚಿಸಿ ನಾಡಿನ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವಗಳನ್ನು ಗಾಳಿಗೆ ತೂರಿ, ಸ್ವಜನ ಪಕ್ಷಪಾತ ಹಾಗೂ ಭ್ರಷ್ಟತೆಯ ಕಿರೀಟ ಧರಿಸಿ ಭಂಡತನದಿಂದ ನಿಮ್ಮನ್ನು ನೀವೇ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

•ನಿಮ್ಮ ಅಕ್ರಮಗಳ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಡಲು ಅವಕಾಶ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದಮನ ಮಾಡುತ್ತಿದ್ದೀರಿ, ಮತ್ತೊಂದೆಡೆ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಉಭಯ ಸದನಗಳಲ್ಲೂ ವಿರೋಧ ಪಕ್ಷವಾಗಿ ಜನಪರ ದನಿಯಾಗಿ ನಿಂತು ಹಗರಣವನ್ನು ಬಯಲು ಮಾಡಲು ಅವಕಾಶ ನೀಡದೆ ಸಾಂವಿಧಾನಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದೀರಿ. ಪಕ್ಷಪಾತಿ ಸ್ಪೀಕರ್ ಅವರು ನಿಮ್ಮ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಶಾಸಕಾಂಗ ವ್ಯವಸ್ಥೆಯ ಕಪ್ಪು ಚುಕ್ಕೆಯಾಗಿದೆ.

•70 ರ ದಶಕದ ತುರ್ತು ಪರಿಸ್ಥಿತಿಯ ಕರಾಳ ಸಂದರ್ಭವನ್ನು ಮತ್ತೆ ಪ್ರತಿಷ್ಠಾಪಿಸಲು ನೀವು ಹೊರಟಂತಿದೆ. ನಿಮ್ಮ ದಮನಕಾರಿ ಧೋರಣೆ ವಿರುದ್ಧ ಅಹೋರಾತ್ರಿ ಧರಣಿ ಅಷ್ಟೇ ಅಲ್ಲ, ಜನತಂತ್ರ ವ್ಯವಸ್ಥೆಯನ್ನು ಕತ್ತಲು ಮಾಡಲು ಹೊರಟಿರುವ, ಭ್ರಷ್ಟಾಚಾರವನ್ನು ರಕ್ಷಿಸುತ್ತಿರುವ ನಿಮ್ಮ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

BJP-JD(S) stage sit-in sit-in protest MLAs spend night chanting Lord Ram in Assembly ಬಿಜೆಪಿ-ಜೆಡಿಎಸ್‌ ನಿಂದ ಅಹೋರಾತ್ರಿ ಧರಣಿ : ವಿಧಾನಸಭೆಯಲ್ಲಿ ಶ್ರೀರಾಮನ ಭಜನೆ ಮಾಡಿ ರಾತ್ರಿ ಕಳೆದ ಶಾಸಕರು!
Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.