ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ಪ್ರಮುಖರು ಹನಿಟ್ರ್ಯಾಪ್ಗೆ ಒಳಗಾದ ಕುರಿತು ತಿಳಿಸಿ ತನಿಖೆ ಆಗಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಇದು ಬಹಳ ಗಂಭೀರ ವಿಚಾರ ಎಂದು ತಿಳಿಸಿದ ಗೃಹ ಸಚಿವರು, ಇದರ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದರು. ಸದನ ಮುಗಿದ ಬಳಿಕ ಹೊರಕ್ಕೆ ಬಂದ ಗೃಹ ಸಚಿವರು, ತಮಗೆ ಅಧಿಕೃತವಾಗಿ ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದಿದ್ದಾರೆ ಎಂದು ವಿವರಿಸಿದರು.
ಅಧಿಕಾರಿಗಳು ಮಾಹಿತಿ ಕೊಟ್ಟ ಮೇಲೆ ಅದರ ಕುರಿತು ಆಲೋಚಿಸುವುದಾಗಿ ತಿಳಿಸಿ ದ್ವಂದ್ವ ನೀತಿ ಪ್ರದರ್ಶನ ಮಾಡಿದ್ದಾರೆ. ನಾವು ಸದನದಲ್ಲಿ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅವರು ಯಾವುದೇ ರೀತಿ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಟೀಕಿಸಿದರು.
ಇದೊಂದು ಗಂಭೀರ ಪ್ರಕರಣ. ಇದು ಸದನದ 224 ಶಾಸಕರ, ರಾಜ್ಯದ ಗೌರವದ ಪ್ರಶ್ನೆ. ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಪ್ರತಿಭಟಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ನೀಡಿದ ಬಗ್ಗೆ ಮುಖ್ಯಮಂತ್ರಿಗಳು ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ನಾವು ರಾಜ್ಯಾದ್ಯಂತ ಜನಾಂದೋಲನಕ್ಕೆ ಕರೆ ಕೊಡಲಿದ್ದೇವೆ ಎಂದು ಪ್ರಕಟಿಸಿದರು. ಬಿಜೆಪಿ- ಜೆಡಿಎಸ್ ಪಕ್ಷಗಳು ಮುಸಲ್ಮಾನರ ವಿರೋಧಿ ಅಲ್ಲ; ಆದರೆ, ಹಿಂದೂಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಹಣಕಾಸಿನ ಸಚಿವರಾದ ಮುಖ್ಯಮಂತ್ರಿಗಳು ನಡೆದುಕೊಳ್ಳುತ್ತಿದ್ದಾರೆ. ಇದನ್ನು ನಾವು ಧಿಕ್ಕರಿಸುತ್ತಿದ್ದೇವೆ ಎಂದು ತಿಳಿಸಿದರು.
ವಿದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸಲ್ಮಾನರಿಗೆ ಕೊಡುವ ಮೊತ್ತವನ್ನು 20 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂಗಳಲ್ಲಿ ಬಡವರಿಲ್ಲವೇ? ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋದರೆ ಅವರಿಗೆ ಹಣಕಾಸಿನ ಅವಶ್ಯಕತೆ ಇಲ್ಲವೇ? ಎಂದು ಕೇಳಿದರು. ಮುಸಲ್ಮಾನ ಹೆಣ್ಮಕ್ಕಳ ಆತ್ಮರಕ್ಷಣೆಗಾಗಿ ಬಜೆಟ್ನಲ್ಲಿ ಹಣ ಇಟ್ಟಿದ್ದಾರೆ. ರಾಜ್ಯದಲ್ಲಿ ಲವ್ ಜಿಹಾದ್ಗೆ ಬಲಿ ಆಗುತ್ತಿರುವುದು ಹಿಂದೂ ಹೆಣ್ಮಕ್ಕಳೇ ಹೊರತು ಮುಸ್ಲಿಂ ಹೆಣ್ಮಕ್ಕಳಲ್ಲ ಎಂದು ಗಮನ ಸೆಳೆದರು.
ಮುಸಲ್ಮಾನರ ಓಲೈಕೆ ಮೂಲಕ ಧರ್ಮಗಳ ನಡುವೆ ಬೆಂಕಿ ಹಚ್ಚಲು ಮುಖ್ಯಮಂತ್ರಿಗಳು ಹೊರಟಿದ್ದು, ಇದನ್ನು ನಾವು ವಿರೋಧಿಸುತ್ತೇವೆ. ಈ ಎಲ್ಲ ವಿಚಾರಗಳನ್ನು ಮುಂದಿಟ್ಟು ಬಿಜೆಪಿ- ಜೆಡಿಎಸ್ ರಾಜ್ಯವ್ಯಾಪಿ ಹೋರಾಟ ಮಾಡಲಿದೆ. ಓಲೈಕೆ ರಾಜಕಾರಣಕ್ಕೆ ಇತಿಶ್ರೀ ಹಾಕಬೇಕು ಎಂದು ಒತ್ತಾಯಿಸಿದರು.
BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







