ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನಿಲ್ ಆಯೋಜಿಸಿದ್ದಂತ ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು ( BJP Leader ) ಭಾಗಿಯಾಗಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಏನು ಹೇಳಿದರು ಅಂತ ಮುಂದೆ ಓದಿ.

ನಗರದಲ್ಲಿ ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾನೂನಿನ ಚೌಕಟ್ಟಿನಲ್ಲಿ ಬದುಕಲು ಅವರಿಗೂ ಅವಕಾಶ ಕೊಡೋಣ. ಕಾನೂನು ಎಲ್ಲರಿಗೂ ಅನ್ವಯ ಆಗುತ್ತದೆ. ಕಾನೂನು ಏನಾದರೂ ತಪ್ಪು ಮಾಡಿದ್ದರೇ ತಪ್ಪೇ ಎಂದರು.

BIG BREAKING NEWS: ‘ಅಮರಾವತಿ ರಾಜಧಾನಿ’ಯನ್ನಾಗಿ ಅಭಿವೃದ್ಧಿಪಡಿಸುವಂತೆ ನೀಡಿದ ಆಂಧ್ರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ | Amaravati capital

ಸಮಾಜದಲ್ಲಿ ಎಲ್ಲರಿಗೂ ಒಳ್ಳೆಯ ರೀತಿಯಲ್ಲಿ ಬದುಕಲು ಅವಕಾಶವಿದೆ. ಅದಕ್ಕೆ ಯಾವುದೇ ರೀತಿಯ ನಾಮಕರಣ ಮಾಡುವುದು ತಪ್ಪು. ಬದುಕಲು ಅವಕಾಶ ಕೊಡದೇ ಬರಿ ನಿಂದಿಸುವ ಕೆಲಸ ಆಗಬಾರದು. ಚಾರ್ಜ್ ಶೀಟ್, ಶಿಕ್ಷೆ ಆಗಿದ್ದರೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ ಎಂದು ಹೇಳಿದರು. ಈ ಮೂಲಕ ರೌಡಿಶೀಟರ್ ಬಗ್ಗೆ ಸಚಿವರು ಸಾಫ್ಟ್ ಕಾರ್ನರ್ ತೊರಿಸಿದ್ದಾರೆ.

ಮತ್ತೊಂದೆಡೆ ಗೃಹ ಸಚಿವ ಅರಗ ಜ್ಞಾನೇಂದ್ರ ರೌಡಿ ಶೀಟರ್ ಸೈಲೆಂಟ್ ಸುನಿಲ್ ರಕ್ತ ದಾನ ಶಿಬಿರ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದರ ಬಗ್ಗೆ ಮಾತನಾಡಿ, ನನಗೆ ಆ ಬಗ್ಗೆ ಐಡಿಯಾ ಇಲ್ಲ. ನಾನು ನಿನ್ನೆ ಇಡೀ ದಿನ ಕ್ಷೇತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆನು. ಸುನಿಲ್ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದುಕೊಳ್ಳುವೆ ಎಂದರು.

BIGG NEWS: ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ: ಅಶ್ವತ್ಥ್ ನಾರಾಯಣ

ಒಟ್ಟಾರೆ ರೌಡಿ ಶೀಟರ್ ಸೈಲೆಂಟ್ ಸುನಿಲ್ ರಕ್ತ ದಾನ ಶಿಬಿರ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರನ್ನು ಆಹ್ವಾನಿಸಿ, ಸೈಲೆಂಟ್ ಆಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎನ್ನಲಾಗುತ್ತಿದೆ. ಈ ಮೂಲಕ ರೌಡಿ ಶೀಟರ್ ರಾಜಕೀಯ ಸೇರುತ್ತಾರಾ ಎನ್ನುವಂತ ಹಲವು ಕುತೂಹಲವನ್ನು ಹುಟ್ಟು ಹಾಕಿದ್ದಾವೆ.

Share.
Exit mobile version