Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0902/11/2025 3:27 PM

ಬೆಂಗಳೂರು : “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ‌ಭಾನುವಾರ ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ” ಎಂದರು.

ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ

“ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿಯು ಶೂನ್ಯ. ಬಿಜೆಪಿ ಬದುಕಿರುವುದೇ ಆರ್ ಎಸ್ ಎಸ್ ನಿಂದ. ಇದು ಬಿಟ್ಟರೆ ಬೇರೆ ಯಾವುದೇ ಅಸ್ತ್ರ ಅವರುಗಳ ಬಳಿ ಇಲ್ಲ. ಅವರಲ್ಲಿ ಶೇ. 20 ರಷ್ಟು ಜನ ಬಿಟ್ಟರೆ ಮಿಕ್ಕ ಎಲ್ಲರೂ ಕಲುಷಿತಗೊಂಡವರೇ. ದಳ, ಕಾಂಗ್ರೆಸ್ ಹಾಗೂ ಬೇರೆ,‌ ಬೇರೆ ಪಕ್ಷಗಳಿಂದ ಹೋಗಿರುವವರೇ ಅಲ್ಲಿರುವುದು” ಎಂದು ತಿವಿದರು.

ಮೆಟ್ರೋ ಸಂಚಾರ ಟನಲ್ ಮೂಲಕವೇ ಅಲ್ಲವೇ?

“ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ನಡೆಸಿ ವರದಿ ಮಾಡಿದ್ದೆ. ಎಸ್.ಎಂ. ಕೃಷ್ಣ ಅವರು, ಅನಂತಕುಮಾರ್ ಅವರು ಹಾಗೂ ನಾನು ದೆಹಲಿಗೆ ತೆರಳಿ ಅಂದಿನ ಪ್ರಧಾನಿಗಳಾದ ವಾಜಪೇಯಿ ಅವರಿಗೆ ವರದಿ ನೀಡಿದ್ದೆವು. ಹೀಗೆ ಯೋಜನೆ ಪ್ರಾರಂಭವಾಯಿತು” ಎಂದು ಹೇಳಿದರು.

ತೇಜಸ್ವಿ ಸೂರ್ಯ ದೊಡ್ಡ ನಾಯಕ; ಅಮೆರಿಕಾದಲ್ಲಿ ಉಗಿಸಿಕೊಂಡು ಬಂದಿದ್ದ

ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಗೆ ಶಿವಕುಮಾರ್ ಧಮ್ಕಿ ಹಾಕುತ್ತಿದ್ದಾರೆ ಎನ್ನುವ ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನೇಕೆ ಧಮ್ಕಿ ಹಾಕಲಿ? ರಾಮಮೂರ್ತಿ ನಮ್ಮ ಹುಡುಗ. ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ ಹೊಸ ಕಾರು ಬೇಕು ಎಂದು ಅರ್ಜಿ ನೀಡಿದ್ದ. ದಾಖಲೆ ಬಿಡುಗಡೆ ಮಾಡಿ ಎಂದರೆ ಬಿಡುಗಡೆ ಮಾಡುತ್ತೇವೆ” ಎಂದು ವ್ಯಂಗ್ಯವಾಡಿದರು.

“ಈಗ ಆತ ಹಾಗೂ ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು?” ಎಂದು ಕಿಡಿ ಕಾರಿದರು.

“ತೇಜಸ್ವಿ ಸೂರ್ಯ ರೈಲು ಯೋಜನೆ ಮಾಡಿ ಎಂದು ಹೇಳುತ್ತಾನೆ. ಆ ಯೋಜನೆ ಮಾಡಲು ಬೆಂಗಳೂರಿನಲ್ಲಿ ಜಾಗ ಎಲ್ಲಿದೆ?‌ ಕೇಂದ್ರ ಸರ್ಕಾರವೇ ಈ ಯೋಜನೆ ಮಾಡಲಿ. ಬಿಆರ್ ಟಿಎಸ್ ಯೋಜನೆ ಮಾಡಲು ಬೆಂಗಳೂರಿನಲ್ಲಿ ಎಲ್ಲಾದರೂ ಜಾಗ ಇದೆಯೇ? ಅವರಿಗೆ ತಲೆ ಇದೆಯೇ? ಇದರಿಂದ ದಿನಕ್ಕೆ ನೂರಾರು ಜನ ಸಾಯಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರು ಬಿಆರ್ ಟಿಎಸ್ ಯೋಜನೆಯಲ್ಲಿ ವಿಫಲರಾದರು” ಎಂದರು.

ಲಾಲ್ ಬಾಗ್ ಹಾಳು ಮಾಡಲು ಮೂರ್ಖನಲ್ಲ

“ನಾನು ಎಲ್ಲಾ ರೀತಿಯ ಅಧ್ಯಯನ ನಡೆಸಿದ್ದೇನೆ. ಲಾಲ್ ಬಾಗ್ ಹಾಳು ಮಾಡಲು ನಾನೇನು ಮೂರ್ಖನಲ್ಲ. ಇದರ ಇತಿಹಾಸವೂ ನನಗೆ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದು ನನಗೆ ಗೊತ್ತಿದೆ” ಎಂದರು.

“ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ. ಜಾರ್ಜ್ ಅವರ ಸಮಯದಲ್ಲಿ ಸ್ಟೀಲ್ ಬ್ರಿಡ್ಜ್ ‌ಗೆ ವಿರೋಧ ಮಾಡಿದರು. ಒಂದೂ ಪರಿಹಾರ ಹೇಳುವುದಿಲ್ಲ. ಸಹಿ ಸಂಗ್ರಹ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಿ. ಅಶೋಕ್ ಅವರಲ್ಲಿ ಮನವಿ ಮಾಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿ ಮಾಡುತ್ತೇವೆ. ಯಾರನ್ನು ಬೇಕಾದರೂ ಅದಕ್ಕೆ ಸೇರಿಸಿಕೊಳ್ಳಲಿ. ಅವರು ಸೂಚಿಸಿದ ತಾಂತ್ರಿಕ ಪರಿಣಿತರನ್ನೇ ಸಮಿತಿಗೆ ಸೇರಿಸೋಣ” ಎಂದು ಹೇಳಿದರು.

ಶಾಸಕರು, ಸಚಿವರು ಅವರವರ ಕೆಲಸಕ್ಕೆ ದೆಹಲಿಗೆ ಹೋಗುತ್ತಾರೆ

ಕಾಂಗ್ರೆಸ್ ‌ನಾಯಕರು ದೆಹಲಿಗೆ ಹೋಗುತ್ತಿರುವುದರ ಬಗ್ಗೆ ಕೇಳಿದಾಗ, “ನಾಯಕರುಗಳು ಅವರವರ ಕೆಲಸಗಳಿಗೆ ಹೋಗುತ್ತಿರುತ್ತಾರೆ. ನಾನು ಬರುವ 5 ಅಥವಾ 6 ನೇ ತಾರೀಖಿನಂದು ಬಿಹಾರಕ್ಕೆ ತೆರಳುತ್ತಿದ್ದೇನೆ. ಕೇಂದ್ರ‌ ನಗರಾಭಿವೃದ್ಧಿ ಸಚಿವರು ಸಭೆ ಕರೆದಿದ್ದಾರೆ. ಇದರ‌ ನಡುವೆ ಕಾವೇರಿ ನದಿ ನೀರಿನ ತೀರ್ಪಿದೆ. ಈ ಬಗ್ಗೆ ವಕೀಲರಿಂದ ವರದಿಯನ್ನು ತರಿಸಿಕೊಂಡಿದ್ದೇನೆ. ಪರಿಸ್ಥಿತಿ ‌ಹೀಗಿರುವಾಗ ದೆಹಲಿಗೆ ಹೋಗಬೇಕಾಗುತ್ತದೆ. ಅದಕ್ಕೆ ರಾಜಕೀಯ ಬಣ್ಣ ಕಟ್ಟಿದರೆ ಹೇಗೆ? ರಾಜಕೀಯ ಕಾರಣಕ್ಕೆ ಹೋಗಲಾಗುತ್ತದೆ ಎಂದು ತಿಳಿದುಕೊಳ್ಳುವುದು ಏತಕ್ಕೆ? ಶಾಸಕರು, ಸಚಿವರು ಅವರರವರ ಕೆಲಸಗಳಿಗೆ ದೆಹಲಿಗೆ ಹೋಗಲಿ ಬಿಡಿ” ಎಂದರು.

“ಒಂದಷ್ಟು ಜನರಿಗೆ ಬಿಹಾರ, ರಿಜ್ವಾನ್, ಶ್ರೀನಿವಾಸ್ ಮಾನೆ ಸೇರಿದಂತೆ ಇತರಿಗೆ ಒರಿಸ್ಸಾ ರಾಜ್ಯಗಳ ಜವಾಬ್ದಾರಿ ನೀಡಿದ್ದಾರೆ. ಸಂಸದ ತುಕಾರಾಂ ಅವರಿಗೆ ಜಿಲ್ಲಾ ಕಾಂಗ್ರೆಸ್ ‌ಅಧ್ಯಕ್ಷರನ್ನು ನೇಮಕ‌ ಮಾಡಲು, ಸಂಘಟನೆ ವಿಚಾರವಾಗಿ ಕಳುಹಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲದರಲ್ಲೂ ರಾಜಕೀಯ ಇರುತ್ತದೆಯೇ” ಎಂದರು.

ಭಾರತಕ್ಕೆ ಜಯವಾಗಲಿ

ಮಹಿಳಾ ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯಾವಳಿ ಬಗ್ಗೆ ಕೇಳಿದಾಗ, “ಜಯ ಎಂದಿಗೂ ಭಾರತದ ಪರವಾಗಿ ಇರುತ್ತದೆ. ನಮ್ಮವರಿಗೆ ಶುಭವಾಗಲಿ” ಎಂದು ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ವನಿತೆಯರು ಗೆಲುವು ಸಾಧಿಸಲಿ ಎಂದು ಹಾರೈಸಿದರು.

SHOCKING: ಕುಡಿಯೋದು ಬಿಡು ಎಂದು ಬುದ್ದಿ ಹೇಳಿದ್ದಕ್ಕೆ ಮರ್ಡರ್

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.