ಮೈಸೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (BJP MLC H Vishwanath ) ಅವರ ಪುತ್ರ, ಪೂರ್ವಜ್ ಇದೀಗ ಕಾಂಗ್ರೆಸ್ ಸೇರ್ಪಡೆಯಾಗೋದಾಗಿ ಘೋಷಿಸಿದ್ದಾರೆ. ಅಲ್ಲದೇ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಮಳೆಹಾನಿಗೆ ಎ, ಬಿ ಮತ್ತು ಸಿ ಎಂದು ವರ್ಗೀಕರಣ: ಯಾವ ಹಾನಿಗೆ ಎಷ್ಟು ಪರಿಹಾರ ಗೊತ್ತಾ.? ಇಲ್ಲಿದೆ ಮಾಹಿತಿ

ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದಂತ ಅವರು, ತಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗೋದಕ್ಕೆ ನಿರ್ಧರಿಸಿದ್ದೇನೆ. ಈ ಬಗ್ಗೆ ಸಿದ್ಧರಾಮಯ್ಯ ಅವರ ಗಮನಕ್ಕೂ ತಂದಿದ್ದೇನೆ. ಅವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

BREAKING NEWS: ‘ಐಎಸ್ ಲಿಂಕ್’ ಆರೋಪದ ಮೇಲೆ ಜೆಎಂಐ ವಿದ್ಯಾರ್ಥಿ ಮೊಹ್ಸಿನ್ ಅಹ್ಮದ್ ಬಂಧನ: ಆ.16 ರವರೆಗೆ ಎನ್ಐಎ ಕಸ್ಟಡಿಗೆ

ಸಿದ್ಧರಾಮಯ್ಯ ಅವರ ಕೈ ಬಲ ಪಡಿಸೋದಕ್ಕೆ ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದೇನೆ. ಸಿದ್ಧರಾಮಯ್ಯನವರು ಮುಂದೆ ಸಿಎಂ ಆಗುವ ಎಲ್ಲಾ ಲಕ್ಷಣಗಳಿವೆ. ಹೀಗಾಗಿ ಅವರ ಪಕ್ಷವನ್ನು ಬೆಂಬಲಿಸೋ ನಿಟ್ಟಿನಲ್ಲಿ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

Share.
Exit mobile version