ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಪ್ರತ್ಯಕ್ಷವಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆಗಮಿಸಿ ಕುತೂಹಲ ಮೂಡಿಸಿದ್ದಾರೆ. ಹೊರಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಂತ ಅವರು, ಸಿದ್ಧರಾಮಯ್ಯ ಜೊತೆಗೆ ಕಾರಿನಲ್ಲಿ ಆಗಮಿಸಿ, ಗಮನ ಸೆಳೆದಿದ್ದಾರೆ.
ಇನ್ನೂ ಸಿಎಂ ಜೊತೆಯಲ್ಲೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆತ್ಮೀಯವಾಗಿ ಮಾತುಕತೆ ನಡೆಸಿದ್ದು ಕಂಡು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರ ಕಾವೇರಿಯಿಂದ ವಿಧಾನಸೌಧಕ್ಕೆ ರವಿಕುಮಾರ್ ಬಂದಿದ್ದು ಕಂಡು ಬಂದಿತು.
ಕಾಂಗ್ರೆಸ್ ನಾಯಕರ ವಿರುದ್ಧ ಎನ್.ರವಿಕುಮಾರ್ ವಾಗ್ಧಾಳಿ ನಡೆಸುತ್ತಿದ್ದರು. ಇದೀಗ ಆತ್ಮೀಯವಾಗಿ ಮಾತನಾಡಿಕೊಂಡು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಬಂದು ಗಮನ ಸೆಳೆಯದರು.
ಬಂಡೀಪುರ, ನಾಗರಹೊಳೆಗೆ ತೆರಳೋ ಪ್ರವಾಸಿಗರಿಗೆ ಶಾಕ್: ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತ
BIG ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಕಲಿ `ENO’ : ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!








