ಬೆಂಗಳೂರು: ವಿಧಾನ ಪರಿಷತ್ ಖಾಲಿ ಸ್ಥಾನಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಭರ್ಜರಿ ಸಿದ್ಧತೆಯನ್ನು ಬಿಜೆಪಿ ಮಾಡಿದೆ.
ಇಂದು ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸುಶೀಲ್ ನಮೋಶಿಗೆ ಟಿಕೆಟ್ ನೀಡಲಾಗಿದೆ.
ಇನ್ನೂ ಪೂರ್ವ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಅವರನ್ನು ಕಣಕ್ಕೆ ಇಳಿಸಿದ್ದರೇ, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಎಂ ಸುರೇಶ್ ಗೆ ಟಿಕೆಟ್ ಘೋಷಣೆಯನ್ನು ಬಿಜೆಪಿ ಮಾಡಿದೆ.

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ








