Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಚ್ಚಿ ಬೀಳಿಸುವ ಘಟನೆ : `ವೆಸ್ಟರ್ನ್ ಟಾಯ್ಲೆಟ್ ಸೀಟ್’ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ.!

14/05/2025 12:51 PM

‘ಕ್ಷಯ ಮುಕ್ತ’ ಭಾರತದ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

14/05/2025 12:46 PM

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.7ರಂದು ಬಜೆಟ್ ಮಂಡನೆ ದಿನವೇ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ: ಆರ್.ಅಶೋಕ್
KARNATAKA

ಮಾ.7ರಂದು ಬಜೆಟ್ ಮಂಡನೆ ದಿನವೇ ಬಿಜೆಪಿಯಿಂದ ಪಾದಯಾತ್ರೆ, ಪ್ರತಿಭಟನೆ: ಆರ್.ಅಶೋಕ್

By kannadanewsnow0902/03/2025 6:28 PM

ಬೆಂಗಳೂರು: ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾರ್ಚ್ 3 ರಂದು ಪ್ರತಿಭಟಿಸಲಾಗುವುದು‌ ಎಂದು ತಿಳಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. ಇದರ ಜೊತೆಗೆ ಹಣ ಇಲ್ಲದೆ ಒಂದು ಲಕ್ಷ ಕೋಟಿ ರೂ.ಸಾಲ ಮಾಡಲಾಗುತ್ತಿದೆ. ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾರ್ಚ್ 7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿದೆ. ದಲಿತರ ಹಣವನ್ನು ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಮಾತ್ರ ಬಳಸಬೇಕು. ಚುನಾವಣೆ ಸಮಯದಲ್ಲಿ ಎಲ್ಲರಿಗೂ ಫ್ರೀ ಎಂದು ಹೇಳಿ, ಈಗ ದಲಿತರ ಹಣ ಬಳಸಲಾಗುತ್ತಿದೆ. ಬಿಜೆಪಿಯ 40% ಕಮಿಶನ್ ಹಣ ಉಳಿಸಿ ಗ್ಯಾರಂಟಿಗೆ ಬಳಸಲಾಗುವುದು ಎನ್ನಲಾಗಿತ್ತು. ಈಗ ಗುತ್ತಿಗೆದಾರರೇ ಕಾಂಗ್ರೆಸ್ ಸರ್ಕಾರದ ಕಮಿಶನ್ ಬಗ್ಗೆ ಹೇಳಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಗ್ಗಿ ಬಗ್ಗಿ ನಡೆಯಬೇಕೆಂದು ಹೇಳಿದ್ದರು. ಆ ಚಾಳಿಯನ್ನೇ ಮುಂದುವರಿಸಿ, ಸಿನಿಮಾ ಕಲಾವಿದರಿಗೆ ನೆಟ್ ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದಾರೆ. ಮೊದಲು ಸಚಿವ ರಾಜಣ್ಣ ಸೇರಿದಂತೆ ಇವರಿಗೆ ವಿರೋಧ ಮಾಡುತ್ತಿರುವವರಿಗೆ ನೆಟ್ ಬೋಲ್ಟ್ ಸರಿ ಮಾಡಲಿ. ಇವರು ಯಾವುದೇ ಕಲಾವಿದರನ್ನು ಆಹ್ವಾನಿಸಿಲ್ಲ. ಕಲಾವಿದರಿಗೆ ಧಮಕಿ ಹಾಕುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಕಲಾವಿದರು ಕಾಂಗ್ರೆಸ್ ಪಕ್ಷದ ಗುಲಾಮರಲ್ಲ. ಇವರ ಆಶೀರ್ವಾದ ಪಡೆದು ಸಿನಿಮಾಗಳು ಯಶಸ್ವಿಯಾಗುತ್ತಿಲ್ಲ ಎಂದರು.

ಧಮಕಿ ಹಾಕುವುದು, ಗೂಂಡಾಗಿರಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ. ಸಿನಿಮಾ ರಂಗಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ನೆರವು ನೀಡಿತ್ತು. ಇಂದು ಅಂಬರೀಶ್ ಅವರು ಇದ್ದಿದ್ದರೆ ಸರಿಯಾಗಿ ಉತ್ತರ ನೀಡುತ್ತಿದ್ದರು‌. ಸಿನಿಮಾ ರಂಗದವರು ಈ ಹೇಳಿಕೆಯನ್ನು ಖಂಡಿಸಬೇಕು. ಇದು ಕಲಾವಿದರಿಗೆ ಮಾಡುವ ಅಪಮಾನ. ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು‌.

ಪ್ರಧಾನಿ ನರೇಂದ್ರ ಮೋದಿಯವರು, ಶರದ್ ಪವಾರ್, ದೇವೇಗೌಡ ಸೇರಿದಂತೆ ಎಲ್ಲರಿಗೂ ಅಪಾರ ಗೌರವ ನೀಡುತ್ತಾರೆ‌. ಅವರು ಗೌರವ ನೀಡುವುದರಲ್ಲಿ ಮಾದರಿ‌. ಡಿ.ಕೆ.ಶಿವಕುಮಾರ್ ಅವರು ಧಮಕಿ ಹಾಕುವುದರಲ್ಲಿ ಮಾದರಿ‌ಯಾಗಿದ್ದಾರೆ ಎಂದರು.

ವೋಟರ್ ಐಡಿ ನಕಲಿ ಸಂಖ್ಯೆ, ನಕಲಿ ಮತದಾರರನ್ನು ಸೂಚಿಸುವುದಿಲ್ಲ- ಚುನಾವಣಾ ಆಯೋಗ ಸ್ಪಷ್ಟನೆ

ನೀವು ಸಣ್ಣಗಾಗಲು ಯೋಚಿಸಿದ್ದೀರಾ? ಈ ವ್ಯಾಯಾಮಗಳನ್ನು ಮಾಡಿ, 7 ದಿನಗಳಲ್ಲಿ ವ್ಯತ್ಯಾಸ ನೋಡಿ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM1 Min Read

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

14/05/2025 12:23 PM1 Min Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM3 Mins Read
Recent News

SHOCKING : ಬೆಚ್ಚಿ ಬೀಳಿಸುವ ಘಟನೆ : `ವೆಸ್ಟರ್ನ್ ಟಾಯ್ಲೆಟ್ ಸೀಟ್’ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ.!

14/05/2025 12:51 PM

‘ಕ್ಷಯ ಮುಕ್ತ’ ಭಾರತದ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

14/05/2025 12:46 PM

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

14/05/2025 12:30 PM
State News
KARNATAKA

BIG NEWS : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

By kannadanewsnow5714/05/2025 12:30 PM KARNATAKA 1 Min Read

ಕಲಬುರಗಿ : ರಾಜ್ಯದಲ್ಲಿ ಈ ಬಾರಿ ಒಟ್ಟು 1,281 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದು ದಾಖಲೆಯ ಸಂಗ್ರಹವಾಗಿದೆ ಎಂದು…

BIG NEWS :  ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಸಮೀಕ್ಷೆ ವೇಳೆ `ಪರಿಶಿಷ್ಟ ಜಾತಿಯವರು’ ತಪ್ಪದೇ ಈ ಮಾಹಿತಿ ನೀಡುವುದು ಕಡ್ಡಾಯ.!

14/05/2025 12:23 PM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ನಾಳೆಯಿಂದ `2025-26ನೇ ಸಾಲಿನ ವರ್ಗಾವಣೆ’ ಆರಂಭ | Govt employee Transfer

14/05/2025 12:02 PM

‘ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ದಾಳಿ ನಡೆಸುತ್ತಿಲ್ಲ’ ಎಂದು ವಿಡಿಯೋ ಮಾಡಿದ್ದ ವ್ಯಕ್ತಿ ಬಂಧನ

14/05/2025 11:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.