Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಪ್ ಕಾರ್ನ್ ಪ್ರಿಯರೇ ಗಮನಿಸಿ ; ಈ ರೀತಿಯ ಪಾಪ್ ಕಾರ್ನ್ ತಿನ್ನೋದಕ್ಕೂ ಮುನ್ನ ಇದನ್ನೋದಿ!

03/01/2026 2:56 PM

BREAKING : ಬಾಂಗ್ಲಾ ಕ್ರಿಕೆಟಿಗ ‘ಮುಸ್ತಾಫಿಜುರ್’ ವಜಾಗೊಳಿಸಿದ ‘BCCI’ ವಿರುದ್ಧ ‘ಇಮಾಮ್ ಅಸೋಸಿಯೇಷನ್’ ಆಕ್ರೋಶ

03/01/2026 2:42 PM

BREAKING : ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

03/01/2026 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಕ್ಫ್ ವಿವಾದದ ವಿರುದ್ಧ ಸಿಡೆದೆದ್ದ ಬಿಜೆಪಿ: ನ.4ರಿಂದ ರಾಜ್ಯಾಧ್ಯಂತ ಪ್ರತಿಭಟನೆಗೆ ಕರೆ
KARNATAKA

ವಕ್ಫ್ ವಿವಾದದ ವಿರುದ್ಧ ಸಿಡೆದೆದ್ದ ಬಿಜೆಪಿ: ನ.4ರಿಂದ ರಾಜ್ಯಾಧ್ಯಂತ ಪ್ರತಿಭಟನೆಗೆ ಕರೆ

By kannadanewsnow0931/10/2024 4:52 PM

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ ಎಂದು ತಿಳಿಸಿದರು.

ಭೂಗಳ್ಳರು ಮಾತ್ರವಲ್ಲದೆ, ಸರ್ಕಾರವೇ ಅಧಿಕೃತವಾಗಿ ಒತ್ತುವರಿ ಆರಂಭ ಮಾಡಿದೆ. ಇದರ ವಿರುದ್ಧ ರೈತ ಸಂಘಟನೆಗಳು ತೀವ್ರವಾಗಿ ಪ್ರತಿಭಟಿಸಬೇಕು. ಹಿಂದೆ ಮುಸ್ಲಿಂ ರಾಜರು ದಾಳಿ ಮಾಡಿ, ಮತಾಂಧತೆ ಮೆರೆದಿದ್ದರು. ಟಿಪ್ಪು ಸುಲ್ತಾನ ಕೊಡಗಿನಲ್ಲಿ ಮತಾಂತರ ಮಾಡಿರುವುದು ಇದಕ್ಕೆ ಸಾಕ್ಷಿ. ಇದೇ ರೀತಿ ಈಗ ಜಮೀನಿನ ಕಬಳಿಕೆ ನಡೆಯುತ್ತಿದೆ. ಇಂತಹವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಸುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಯಾವುದೇ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಾವು ಹೋರಾಟ ಮಾಡಿದ್ದಕ್ಕೆ ಸಿಎಂ ವಿರುದ್ಧ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಹಾಗೂ ಇಡಿ ತನಿಖೆ ಮಾಡುತ್ತಿದೆ. ಬೆಂಬಲಿಗರ ವಿರುದ್ಧವೂ ತನಿಖೆ ನಡೆದಿದೆ. ಈ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಇನ್ನು ನ್ಯಾಯಾಲಯದ ಮೂಲಕ ಹೋರಾಟ ಮಾಡುತ್ತೇವೆ ಎಂದರು.

ವಕ್ಫ್ ವಿರುದ್ಧ ರೈತರು ಹೋರಾಟ ಮಾಡುತ್ತಿದ್ದು, ಬಿಜೆಪಿ ಅವರಿಗೆ ಬೆಂಬಲ ನೀಡುತ್ತಿದೆ. ರೈತರಿಗೆ ನೋಟಿಸ್ ಕೊಟ್ಟ ಅಧಿಕಾರಿಯನ್ನು ಜೈಲಿಗೆ ಹಾಕಲು ಸಿಎಂಗೆ ಧಮ್ ಇಲ್ಲ. ಇಲ್ಲಿ ರಾಜಕಾರಣಕ್ಕಿಂತ ರೈತರಿಗೆ ಉತ್ತರ ನೀಡುವುದು ಮುಖ್ಯ ಎಂದು ಆಗ್ರಹಿಸಿದರು.

ಶಕ್ತಿ ಯೋಜನೆಗೆ ನಾಮ

ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ನಾವು ಹಿಟ್ ಮಾಡಿದ ಕೂಡಲೇ ಕಾಂಗ್ರೆಸ್ ಓಡಿಹೋಗುತ್ತದೆ. ಈ ಸರ್ಕಾರ ತುಘಲಕ್ ಆಡಳಿತ ನೀಡಿ ನಗೆಪಾಟಲಿಗೀಡಾಗಿದೆ. ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳು ಟುಸ್ ಪಟಾಕಿಯಾಗಲಿದೆ. ಡಿ.ಕೆ‌.ಶಿವಕುಮಾರ್ ಅವರಿಗೆ ಮಹಿಳೆಯರು ಫೋನ್ ಕರೆ ಮಾಡಿ ಯೋಜನೆ ಬೇಡವೆಂದು ತಿಳಿಸಿದ್ದಾರಂತೆ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ, ಯೋಜನೆ ರದ್ದುಪಡಿಸಲು ಈ ರೀತಿ ಕಾರಣ ಹೇಳುತ್ತಿದ್ದಾರೆ. ಇದರ ಜೊತೆಗೆ ಪಡಿತರ ಚೀಟಿ ರದ್ದು ಮಾಡಲು ಎಲ್ಲ ಬಗೆಯ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಏನು ಬೇಕಾದರೂ ಮಾಡಬಹುದು ಎಂಬಂತೆ ವರ್ತಿಸುತ್ತಿದ್ದಾರೆ. ಲೋಕಸಭಾ ಚುನಾವಣೆ‌ ಬಳಿಕ ಗ್ಯಾರಂಟಿ ಇರಲ್ಲ ಎಂದು ನಾವು ಹೇಳಿದ್ದೆವು. ಈಗ ಅದರ ಮೊದಲ ಹೆಜ್ಜೆಯನ್ನು ಸರ್ಕಾರ ಇರಿಸಿದೆ ಎಂದರು.

ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸರ್ಕಾರವೇ ಸಾರಿಗೆ ಇಲಾಖೆಗೆ ಕೋಟ್ಯಂತರ ರೂಪಾಯಿ ಹಣ ನೀಡಬೇಕಿದೆ. ಸರ್ಕಾರದ ಖಜಾನೆ ಪೂರ್ಣ ಖಾಲಿಯಾಗಿದೆ. ಇಷ್ಟಾದರೂ ಯಾವ ಮುಖ ಇಟ್ಟುಕೊಂಡು ಉಪಚುನಾವಣೆ‌ ಎದುರಿಸಲು ಮುಂದಾಗಿದ್ದಾರೆಂದು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಒಮ್ಮೆಯೂ ಚನ್ನಪಟ್ಟಣಕ್ಕೆ ಭೇಟಿ ನೀಡಿಲ್ಲ. ಡಿ.ಕೆ.ಶಿವಕುಮಾರ್ ಬೆಂಗಳೂರು ಉಸ್ತುವಾರಿ ವಹಿಸಿಕೊಂಡು ಕಮಿಶನ್ ಪಡೆಯುತ್ತಿದ್ದಾರೆ. ರಾಮಲಿಂಗಾರೆಡ್ಡಿ ಬೆಂಗಳೂರು ಉಸ್ತುವಾರಿ ಸಿಗಲು ಕಾಯುತ್ತಿದ್ದಾರೆ. ಜನರು ಈ ಸರ್ಕಾರವನ್ನು ತಿರಸ್ಕರಿಸಲಿದ್ದಾರೆ ಎಂದರು.

ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್

ನಮ್ಮ ಕುಟುಂಬದಿಂದ 65 ಎಕರೆ ಜಾಗವನ್ನು ಎಚ್ಎಂಟಿಗೆ ನೀಡಿದ್ದೆವು. ಈಗ ಆ ಜಾಗದಲ್ಲಿ ಅರಣ್ಯ ನಾಶವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇದು ಅರಣ್ಯ ಭೂಮಿ ಎನ್ನುವುದಾದರೆ, ಇದನ್ನು ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂಬುದನ್ನು ನೆನಪಿಸಿಕೊಳ್ಳಬೇಕು. ಎಚ್ಎಂಟಿ ಕಾರ್ಖಾನೆಯನ್ನು ಅಂದಿನ ಪ್ರಧಾನಿ ಜವಹರಲಾಲ್ ನೆಹರು ಉದ್ಘಾಟಿಸಿದ್ದರು‌.ಅವರೇ ಜಾಗ ನೀಡಿ, ಈಗ ಅದು ಅರಣ್ಯ ಭೂಮಿ ಎಂದು ಹೇಳುತ್ತಿದ್ದಾರೆ. ನಾನು ಒಂದನೇ ತರಗತಿಯಲ್ಲಿ ಇದ್ದಾಗಲೂ ಅದು ಎಚ್ಎಂಟಿಗೆ ಸೇರಿತ್ತು. ಈಗ ಇವರು ಮಾಜಿ ಪ್ರಧಾನಿ ನೆಹರು ವಿರುದ್ಧ ಪ್ರಕರಣ ದಾಖಲಿಸುತ್ತಾರಾ? ಅಂದಿನ ಕಾಂಗ್ರೆಸ್ ಮುಖ್ಯಮಂತ್ರಿ ವಿರುದ್ಧ ಕೇಸು ದಾಖಲಿಸುತ್ತಾರಾ? ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುರಿ ಮಾಡಲು ಈ ರೀತಿ ಮಾಡಬಾರದು. ಅರಣ್ಯ ಭೂಮಿಯನ್ನು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿ ನೀಡಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಭೂ ಕಬಳಿಕೆ ಆರೋಪ ಮಾಡಬೇಕಾಗುತ್ತದೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

03/01/2026 1:49 PM1 Min Read

BREAKING : `ಜಿ ರಾಮ್‌ ಜಿ’ ಹಿಂಪಡೆದು `ಮನರೇಗಾ ಕಾಯ್ದೆ’ ಮರುಸ್ಥಾಪಿಸುವವರೆಗೆ ಹೋರಾಟ: CM ಸಿದ್ದರಾಮಯ್ಯ ಘೋಷಣೆ

03/01/2026 1:33 PM3 Mins Read

BIG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಕೃಷಿಯೇತರ’ ಜಮೀನಿಗೆ `ಇ-ಖಾತಾ’ಪಡೆಯಲು ಅವಕಾಶ.!

03/01/2026 1:21 PM1 Min Read
Recent News

ಪಾಪ್ ಕಾರ್ನ್ ಪ್ರಿಯರೇ ಗಮನಿಸಿ ; ಈ ರೀತಿಯ ಪಾಪ್ ಕಾರ್ನ್ ತಿನ್ನೋದಕ್ಕೂ ಮುನ್ನ ಇದನ್ನೋದಿ!

03/01/2026 2:56 PM

BREAKING : ಬಾಂಗ್ಲಾ ಕ್ರಿಕೆಟಿಗ ‘ಮುಸ್ತಾಫಿಜುರ್’ ವಜಾಗೊಳಿಸಿದ ‘BCCI’ ವಿರುದ್ಧ ‘ಇಮಾಮ್ ಅಸೋಸಿಯೇಷನ್’ ಆಕ್ರೋಶ

03/01/2026 2:42 PM

BREAKING : ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

03/01/2026 1:49 PM

BREAKING: ವೇನೆಜುವೆಲಾ ರಾಜಧಾನಿಯಲ್ಲಿ ಸರಣಿ ಸ್ಫೋಟದ ಸದ್ದು! ನಡುಗಿದ ಕಾರಕಾಸ್ ನಗರ, ಹೈ ಅಲರ್ಟ್ ಘೋಷಣೆ

03/01/2026 1:40 PM
State News
KARNATAKA

BREAKING : ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

By kannadanewsnow0503/01/2026 1:49 PM KARNATAKA 1 Min Read

ತುಮಕೂರು : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ…

BREAKING : `ಜಿ ರಾಮ್‌ ಜಿ’ ಹಿಂಪಡೆದು `ಮನರೇಗಾ ಕಾಯ್ದೆ’ ಮರುಸ್ಥಾಪಿಸುವವರೆಗೆ ಹೋರಾಟ: CM ಸಿದ್ದರಾಮಯ್ಯ ಘೋಷಣೆ

03/01/2026 1:33 PM

BIG NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಕೃಷಿಯೇತರ’ ಜಮೀನಿಗೆ `ಇ-ಖಾತಾ’ಪಡೆಯಲು ಅವಕಾಶ.!

03/01/2026 1:21 PM

BREAKING : ಬಳ್ಳಾರಿಯಲ್ಲಿ ಫೈರಿಂಗ್ ಪ್ರಕರಣ : ಶಾಸಕ ಭರತ್​ ರೆಡ್ಡಿ ಸೇರಿ 22 ಜನರ ವಿರುದ್ಧ ‘FIR’ ದಾಖಲು

03/01/2026 1:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.