ಬೆಂಗಳೂರು : ಭಾರತೀಯ ಜನತಾ ಪಕ್ಷ ( Bharatiya Janata Party – BJP ) ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ( Karnataka Assembly Election 2023 ) ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಿಕೊಂಡಿ ಬಂದಿದೆ.ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಇಂದು ಪ್ರಾರಂಭವಾಗುತ್ತಿದೆ ಎಂದರು.

ನಿಮಗೆ ಬಂಜೆತನ, ಸೋರಿಯಾಸಿಸ್, ಥೈರಾಯಿಡ್ ಸೇರಿ ‘ದೀರ್ಘಕಾಲಿಕ ಸಮಸ್ಯೆ’ ಕಾಡುತ್ತಿದೆಯಾ.? ಇಲ್ಲಿದೆ ಪರಿಹಾರ | Homeopathy Treatment

ರಾಜ್ಯದಲ್ಲಿ ಬಿ.ಜೆ.ಪಿ.ಸರ್ಕಾರ ಮಾಡಿರುವ ಕಾರ್ಯಕ್ರಮಗಳು, ನೀತಿಗಳು ಮತ್ತು ಕೇಂದ್ರ ಸರ್ಕಾರದ ಕಾರ್ಯಕ್ರಮಗಳಿಂದಾಗಿ ಒಂದೊಂದು ಕ್ಷೇತ್ರದ ಸಾವಿರಾರು ಜನರಿಗೆ ಅನುಕೂಲವಾಗಿದೆ. ಅದನ್ನು ಜನಕ್ಕೆ ತಿಳಿಹೇಳಿ ಮುಂಬರುವ ಕಾರ್ಯಕ್ರಮಗಳನ್ನು ಯಾವ ವರ್ಗಗಳಿಗೆ ರೂಪಿಸಿದೆ, ಯಾವ ರೀತಿ ಲಾಭಪಡೆಯಬೇಕೆಂಬ ತೀರ್ಮಾನಗಳನ್ನು ಜನರಿಗೆ ತಿಳಿಸಲಾಗುವುದು.

ಎಲ್ಲೆಡೆ ಉತ್ಸಾಹ

ಬಿ.ಜೆ.ಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಿ 2023 ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾ.ಜ.ಪ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದರು.

ಸಮಾವೇಶದ ಜೊತೆ ಸ್ಥಳೀಯ ಕಾರ್ಯಕರ್ತರು ರೂಪಿಸಿದಂತೆ 2- 3 ಸಣ್ಣ ಪುಟ್ಟ ಕಾರ್ಯಕ್ರಮಗಳು ಇರಲಿವೆ. ಫಲಾನುಭವಿಗಳೊಂದಿಗೆ ಮಾತನಾಡುವುದು, ಬೇರೆ ಬೇರೆ ಕಡೆ ಭೇಟಿ ನೀಡುವುದು ಇರುತ್ತದೆ ಎಂದರು.

BIGG NEWS : ಈ ಬಾರಿ ಬೆಳಗಾವಿಯಲ್ಲಿ ನವೆಂಬರ್ 1 ರಂದು ಅದ್ಧೂರಿಯಾಗಿ `ಕನ್ನಡ ರಾಜ್ಯೋತ್ಸವ’ ಆಚರಣೆ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಭಾರತ್ ಜೋಡೋ ಯಾತ್ರೆಗೆ ಮಹತ್ವವಿಲ್ಲ

ಭಾರತ್ ಜೋಡೋ ಯಾತ್ರೆ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಜೋಡೋ ಯಾತ್ರೆ ಯಾರನ್ನು ಜೋಡಿಸುತ್ತಿದೆ, ಯಾರನ್ನು ಒಡೆಯುತ್ತಿದೆ ಎಂದು ಜಗತ್ತಿಗೆ ತಿಳಿದಿದೆ. ಅದಕ್ಕೆ ಯಾವ ಮಹತ್ವವೂ ಉಳಿದಿಲ್ಲ. ನಮ್ಮ ಕೆಲಸ, ನಮ್ಮ ಕಾರ್ಯಕ್ರಮ ಗಳನ್ನು ಜನರಿಗೆ ತಿಳಿಸಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕೂ ಜನಸಂಕಲ್ಪ ಯಾತ್ರೆಗೂ ಸಂಬಂಧವಿಲ್ಲ ಎಂದರು.

Share.
Exit mobile version