ಮಂಡ್ಯ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಬರಬೇಕು ಎಂದು ನಾನಾ ಕಸರತ್ತು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಮಂಡ್ಯದಲ್ಲಿ ಇಂದು ಹಿಂದೂಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು.ಮಂಡ್ಯದಲ್ಲಿ ಗೆದ್ದರೆ ಇಂಡಿಯಾ ಗೆದ್ದರಂತೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.

BIGG NEWS: ದಸರಾ ಹಿನ್ನೆಲೆ ಬೆಂಗಳೂರು ಏರ್‌ ಪೋರ್ಟ್‌ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ; ಪ್ರಯಾಣಿಕರಿಗೆ ಸಖತ್‌ ಮನರಂಜನೆ

ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ಸಮಾವೇಶದಲ್ಲಿ ಮಾತನಾಡಿ ಸಚಿವ ಕೆ.ಸಿ.ನಾರಾಯಣಗೌಡ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ನಾಲ್ಕು ಸ್ಥಾನ ಗೆದ್ದರೆ ಇಂಡಿಯಾ ಗೆದ್ದಂತೆ. ಮಂಡ್ಯಕ್ಕೆ ಪ್ರಧಾನಿ ಮೋದಿ ಕರೆಸಿ ಶಕ್ತಿ ತುಂಬುವ ಕೆಲಸ ಮಾಡ್ತೇನೆ. ಲಕ್ಷಾಂತರ ಜನ ಸೇರಿಸಿ ಬೃಹತ್ ಕಾರ್ಯಕ್ರಮ ಮಾಡುತ್ತೇನೆ ಎಂದರು.
ಕೆ.ಆರ್​.ಪೇಟೆ ಶಾಸಕನಾಗಲು ನೀವೆಲ್ಲರೂ ಆಶೀರ್ವಾದ ಮಾಡಿದ್ದೀರಿ. ಆ ಋಣ ತೀರಿಸಲು ಎಲ್ಲಾ ಜಾತಿಯವರಿಗೂ 20ಕ್ಕೂ ಹೆಚ್ಚು ಸಮುದಾಯ ಭವನ ನಿರ್ಮಿಸಲು ಮುಂದಾಗಿದ್ದೇನೆ. ಕೆ.ಆರ್​.ಪೇಟೆಯಿಂದ ಹೋಗಿ ಶಿವಮೊಗ್ಗ ಉಸ್ತುವಾರಿ ಸಚಿವನಾಗಿದ್ದೇನೆ. ಹಾಗಾಗಿ ಮಂಡ್ಯ ಜಿಲ್ಲೆಯಲ್ಲಿ ಕೆಲಸ ಕೊರತೆ ಇದೆ ಎಂದು ಹೇಳಿದರು.

Share.
Exit mobile version