Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಇದೆಂತಾ ಅವ್ಯವಸ್ಥೆ : ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ!

12/09/2025 3:30 PM

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಗುಡುಗು
KARNATAKA

ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಗುಡುಗು

By kannadanewsnow0911/09/2024 4:42 PM

ಕಲಬುರಗಿ : ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಎಸ್ಸಿ, ಎಸ್ಟಿಗಳಿಗೆ ಗೌರವ ಕೊಡಬೇಕು; ಅವರಿಗೆ ರಕ್ಷಣೆ ಕೊಡಬೇಕೆಂಬ ದೃಷ್ಟಿಯಿಂದ ನಾವು ರಾಜ್ಯಾದ್ಯಂತ ನಾಳೆ, ನಾಡಿದ್ದು ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡುತ್ತೇವೆ ರಾಹುಲ್ ಗಾಂಧಿಯವರು ಮೀಸಲಾತಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಎರಡು ಸಾರಿ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಬರೆದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವತ್ತು ಅಪಮಾನ ಮಾಡಲಾಗಿತ್ತು. ಈಗ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿ ಅವರ ವಿಚಾರಕ್ಕೇ ತಿಲಾಂಜಲಿ ನೀಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ದಲಿತರ ಬದುಕಿಗೆ, ಎಸ್ಸಿ, ಎಸ್ಟಿಗಳ ಮೀಸಲಾತಿಗೆ ಕೊಡಲಿಪೆಟ್ಟು ಹಾಕುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇನಾ ನೀವು ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ನೀಡುವ ಗೌರವ ,ಇದೇನಾ ನೀವು ಸಂವಿಧಾನಕ್ಕೆ ಕೊಡುವ ಮರ್ಯಾದೆ ಎಂದು ಕೇಳಿದರು.

ಮೀಸಲಾತಿ ಎಂಬುದು ಕಾಂಗ್ರೆಸ್ ಪಾರ್ಟಿಯ ಭಿಕ್ಷೆಯಲ್ಲ

ಮೀಸಲಾತಿ ಎಂಬುದು ಎಸ್ಸಿ, ಎಸ್ಟಿಗಳ ಹಕ್ಕು. ಅದು ಕಾಂಗ್ರೆಸ್ ಪಾರ್ಟಿಯ ಭಿಕ್ಷೆಯಲ್ಲ. 1955ರಲ್ಲಿ ಕಾಕಾ ಕಾಲೇಕರ್ ಸಮಿತಿ ವರದಿ ನೀಡುವ ಸಂದರ್ಭದಲ್ಲಿ ನೆಹರೂ ಅವರು ಮೀಸಲಾತಿಯನ್ನು ವಿರೋಧಿಸಿದ್ದರು. ಅಂದರೆ ನೆಹರೂ ಅವರು ಕೂಡ ಸಂವಿಧಾನದಲ್ಲಿದ್ದ ಮೀಸಲಾತಿಯನ್ನು ವಿರೋಧಿಸಿದ್ದರು ಎಂದು ಆಕ್ಷೇಪಿಸಿದರು. ಮೀಸಲಾತಿ ಕೊಡಬಾರದು ಎಂಬ ಚಿಂತನೆ ಕಾಂಗ್ರೆಸ್ಸಿಗರ ರಕ್ತದಲ್ಲೇ ಇದೆ ಎಂದು ಅವರು ಟೀಕಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಮೀಸಲಾತಿ ಖತಂ ಮಾಡುತ್ತೇವೆ; ನಿಲ್ಲಿಸುತ್ತೇವೆ ಎಂದು ರಾಹುಲ್ ಗಾಂಧಿಯವರು ತಮ್ಮ ಮನದಾಳದ ಇಂಗಿತವನ್ನು ಹೇಳಿದ್ದಾರೆ. ಮೀಸಲಾತಿ ಬಗ್ಗೆ ರಾಹುಲ್ ಗಾಂಧಿಯವರಿಗೆ ಇರುವ ಆಕ್ರೋಶ, ಅಭಿಪ್ರಾಯವು ಅವರ ಅಮೆರಿಕದ ಭಾಷಣದಲ್ಲಿ ವ್ಯಕ್ತವಾಗಿದೆ ಎಂದು ವಿವರಿಸಿದರು.

ಸಂವಿಧಾನಕ್ಕೆ 106 ತಿದ್ದುಪಡಿ ಮೂಲಕ ಡಾ.ಅಂಬೇಡ್ಕರರಿಗೆ ಅವಮಾನ

1990ರ ಸೆಪ್ಟೆಂಬರ್ 6ರಂದು ರಾಜೀವ್ ಗಾಂಧಿಯವರು ಮಂಡಲ್ ಕಮಿಷನ್ ವರದಿಯನ್ನು ಮತ್ತು ಮೀಸಲಾತಿಯನ್ನು ವಿರೋಧಿಸಿದ್ದರು. ಮೀಸಲಾತಿಯನ್ನು ನೆಹರೂ, ರಾಜೀವ್ ಗಾಂಧಿಯವರು ವಿರೋಧಿಸಿದ್ದರು . ಸಂವಿಧಾನದಲ್ಲಿ ಮೀಸಲಾತಿ ನೀಡಿದ್ದು ಕಾಂಗ್ರೆಸ್ಸಿಗರಿಗೆ ಇಷ್ಟ ಇಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ ಒಂದಲ್ಲ; ಎರಡಲ್ಲ, 106 ತಿದ್ದುಪಡಿಗಳನ್ನು ತಂದಿತ್ತು ಎಂದು ಟೀಕಿಸಿದರು. ಕಾಂಗ್ರೆಸ್ಸಿಗರು ನಿರಂತರವಾಗಿ ಸಂವಿಧಾನಕ್ಕೆ ಅವಮಾನ ಮಾಡಿದವರು, ಅಗೌರವ ತೋರಿದವರು ಎಂದು ರಾಜಕುಮಾರ ಪಾಟೀಲ ತೇಲ್ಕೂರ ದೂರಿದರು.

ಒಂದು ಸಮಯ ಬಂದರೆ, ಭಾರತದಲ್ಲಿ ಎಲ್ಲರಿಗೂ ಸಮಾನತೆ ಬರಲು ಮೀಸಲಾತಿ ನಿಲ್ಲಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾಗಿ ಆಕ್ರೋಶ ಹೊರಹಾಕಿದರು. ಸಂಸತ್ತಿನ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂವಿಧಾನವನ್ನು ಕೈಯಲ್ಲಿ ಹಿಡಿದು ಎಲ್ಲರಿಗೂ ತೋರಿಸುತ್ತ ನಾವು ಸಂವಿಧಾನವನ್ನು ರಕ್ಷಿಸುತ್ತೇವೆ, ಸಂವಿಧಾನವನ್ನು ಉಳಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದೇ ಸಂವಿಧಾನದಲ್ಲಿ ಮೀಸಲಾತಿ ಕುರಿತು ತಿಳಿಸಿದೆ. ಅಂಥ ಸಂವಿಧಾನಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ ಎಂದರು. ಇದೇನಾ ನಿಮ್ಮ ಸಂವಿಧಾನ ರಕ್ಷಣೆ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ, ಉತ್ತರ ಕೊಡಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

BREAKING: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು | Serial Actor Varun Aaradhya

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು: ಸಚಿವ ಜಮೀರ್ ಅಹಮದ್ ಖಾನ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇದೆಂತಾ ಅವ್ಯವಸ್ಥೆ : ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ!

12/09/2025 3:30 PM1 Min Read

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM1 Min Read

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM1 Min Read
Recent News

ರಾಜ್ಯದಲ್ಲಿ ಇದೆಂತಾ ಅವ್ಯವಸ್ಥೆ : ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ!

12/09/2025 3:30 PM

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM
State News
KARNATAKA

ರಾಜ್ಯದಲ್ಲಿ ಇದೆಂತಾ ಅವ್ಯವಸ್ಥೆ : ರಾಯಚೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮಹಿಳೆಗೆ ಹೆರಿಗೆ!

By kannadanewsnow0512/09/2025 3:30 PM KARNATAKA 1 Min Read

ರಾಯಚೂರು : ರಾಜ್ಯದ ಹಲವು ಜಿಲ್ಲೆಯಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ರೀತಿ ಮೂಲಭೂತ ಸೌಕರ್ಯಗಳು ಇಲ್ಲ. ಸರಿಯಾದ ವೈದ್ಯರು ಹಾಗೂ…

ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:27 PM

ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut

12/09/2025 3:21 PM

ಸೆ.19ರಂದು ಸಾಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

12/09/2025 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.