Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಒಂದೇ ದಿನ ಚಿನ್ನದ ಬೆಲೆ 3600 ರೂ.ಏರಿಕೆ |Gold Price Hike

08/08/2025 6:30 AM

BIG NEWS : 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯ :` CBSE’ ಮಹತ್ವದ ಆದೇಶ

08/08/2025 6:26 AM

SHOCKING: ರಾಜ್ಯದಲ್ಲಿ ಮನಕಲಕುವ ಘಟನೆ: ಬಡತನದಿಂದ ನವಜಾತ ಶಿಶುವನ್ನೇ ಸಾಂತ್ವಾನ ಕೇಂದ್ರಕ್ಕೆ ಕೊಟ್ಟ ತಾಯಿ

08/08/2025 6:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತೆರಿಗೆ ಹಂಚಿಕೆಯ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿಗರು ‘ದೆಹಲಿ ಗುಲಾಮ’ರಾಗಿದ್ದಾರೆ: ಸಿಎಂ ಸಿದ್ಧರಾಮಯ್ಯ
KARNATAKA

ತೆರಿಗೆ ಹಂಚಿಕೆಯ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಬಿಜೆಪಿಗರು ‘ದೆಹಲಿ ಗುಲಾಮ’ರಾಗಿದ್ದಾರೆ: ಸಿಎಂ ಸಿದ್ಧರಾಮಯ್ಯ

By kannadanewsnow0913/01/2025 7:44 PM

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ?

2018-19ರಲ್ಲಿ ರೂ. 24.42 ಲಕ್ಷ ಕೋಟಿಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ ರೂ.46.28 ಲಕ್ಷ ಕೋಟಿಯಷ್ಟಾಗಿದೆ. 2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು ರೂ.46,288 ಕೋಟಿಗಳಾಗಿದ್ದರೆ, 2024-25ರಲ್ಲಿ ಇದು ರೂ.44,485 ಕೋಟಿ ಮಾತ್ರ. ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ?

ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ ರೂ.45,000 ಕೋಟಿ ಮತ್ತು ಅನುದಾನವಾಗಿ ರೂ.15,000 ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ.

ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (ರೂ.17,403 ಕೋಟಿ), ಮಧ್ಯಪ್ರದೇಶ (ರೂ.13,582 ಕೋಟಿ), ರಾಜಸ್ತಾನ (ರೂ.10,426 ಕೋಟಿ) ಮತ್ತು ಉತ್ತರಪ್ರದೇಶಕ್ಕೆ (ರೂ.31,099 ಕೋಟಿ) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ ರೂ.6,310 ಕೋಟಿ ನೀಡಿದೆ. ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ದಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು?

ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯಕ್ಕೆ ಪರಿಹಾರವಾಗಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ.

ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ.

ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ. ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ.

BREAKING NEWS: ‘ಜಪಾನ್’ನಲ್ಲಿ 6.9 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ | Earthquake Strikes In Japan

ಹಿರಿಯ ಯೋಧರಿಗೆ ಗೌರವ: ಭಾರತವು ತನ್ನ ಕೆಚ್ಚೆದೆಯ ವೀರರನ್ನು ಸ್ಮರಿಸುತ್ತದೆ -ಏರ್ ಮಾರ್ಷಲ್ ಅನಿಲ್ ಖೋಸ್ಲಾ

Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲಿ ಮನಕಲಕುವ ಘಟನೆ: ಬಡತನದಿಂದ ನವಜಾತ ಶಿಶುವನ್ನೇ ಸಾಂತ್ವಾನ ಕೇಂದ್ರಕ್ಕೆ ಕೊಟ್ಟ ತಾಯಿ

08/08/2025 6:25 AM1 Min Read

SHOCKING : ಬೆಂಗಳೂರಲ್ಲಿ ಘೋರ ಘಟನೆ : ಆನ್ ಲೈನ್ ಗೇಮ್ ಚಟಕ್ಕೆ ಬಿದ್ದ ಬಾಲಕನ ಕತ್ತು ಸೀಳಿ ಹತ್ಯೆ.!

08/08/2025 6:18 AM1 Min Read

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

08/08/2025 6:15 AM1 Min Read
Recent News

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಒಂದೇ ದಿನ ಚಿನ್ನದ ಬೆಲೆ 3600 ರೂ.ಏರಿಕೆ |Gold Price Hike

08/08/2025 6:30 AM

BIG NEWS : 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ಗಳಿಗೆ ಶೇ.75ರಷ್ಟು ಹಾಜರಾತಿ ಕಡ್ಡಾಯ :` CBSE’ ಮಹತ್ವದ ಆದೇಶ

08/08/2025 6:26 AM

SHOCKING: ರಾಜ್ಯದಲ್ಲಿ ಮನಕಲಕುವ ಘಟನೆ: ಬಡತನದಿಂದ ನವಜಾತ ಶಿಶುವನ್ನೇ ಸಾಂತ್ವಾನ ಕೇಂದ್ರಕ್ಕೆ ಕೊಟ್ಟ ತಾಯಿ

08/08/2025 6:25 AM

BIG NEWS : 22 ತಿಂಗಳಲ್ಲಿ 300 ಲೀಟರ್ ‘ಎದೆ ಹಾಲು’ ದಾನ : ಸಾವಿರಾರು ಮಕ್ಕಳ ಪ್ರಾಣ ಉಳಿಸಿದ ಮಹಾತಾಯಿ.!

08/08/2025 6:24 AM
State News
KARNATAKA

SHOCKING: ರಾಜ್ಯದಲ್ಲಿ ಮನಕಲಕುವ ಘಟನೆ: ಬಡತನದಿಂದ ನವಜಾತ ಶಿಶುವನ್ನೇ ಸಾಂತ್ವಾನ ಕೇಂದ್ರಕ್ಕೆ ಕೊಟ್ಟ ತಾಯಿ

By kannadanewsnow0908/08/2025 6:25 AM KARNATAKA 1 Min Read

ಮಂಡ್ಯ: ರಾಜ್ಯದಲ್ಲಿ ಮನಕಲಕುವ ಘಟನೆ ಎನ್ನುವಂತೆ ನವಜಾತ ಶಿಶುವನ್ನು ಸಾಂತ್ವನ ಕೇಂದ್ರಕ್ಕೆ ತಾಯಿ ನೀಡಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಬಡತನದ…

SHOCKING : ಬೆಂಗಳೂರಲ್ಲಿ ಘೋರ ಘಟನೆ : ಆನ್ ಲೈನ್ ಗೇಮ್ ಚಟಕ್ಕೆ ಬಿದ್ದ ಬಾಲಕನ ಕತ್ತು ಸೀಳಿ ಹತ್ಯೆ.!

08/08/2025 6:18 AM

ಇನ್ಮುಂದೆ ತಿಂಗಳಿಗೊಮ್ಮೆ ಕಾಡಂಚಿನ ಗ್ರಾಮಗಳಲ್ಲಿ ‘ಜನಸಂಪರ್ಕ ಸಭೆ’ ಕಡ್ಡಾಯ: ಸಚಿವ ಈಶ್ವರ್ ಖಂಡ್ರೆ

08/08/2025 6:15 AM

BIG NEWS : ರಾಜ್ಯದಲ್ಲಿ ಮತದಾರ ಪಟ್ಟಿ ಬಳಸಿ `ಡಿಜಿಟಲ್ ಜಾತಿಗಣತಿ’ : 6 ವರ್ಷ ಮೇಲ್ಪಟ್ಟವರ `ಆಧಾರ್ ದೃಢೀಕರಣ ಕಡ್ಡಾಯ.!

08/08/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.