ಬೆಂಗಳೂರು: ದಸರಾ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರವನ್ನು ಕಳೆದ 20 ವರ್ಷಗಳಿಂದ ಏರಿಕೆ ಮಾಡಿಕೊಂಡು ಬರಲಾಗುತ್ತಿದೆ. ಬಿಜೆಪಿಗರೇ ನೀವು ಅಧಿಕಾರದಲ್ಲಿ ಇದ್ದಾಗ ಮಹಿಷಾಸುರ ಟ್ಯಾಕ್ಸ್, ನಿಮ್ಮ ಸರ್ಕಾರವು ಜಾರಿ ಮಾಡಿರಲಿಲ್ವ? ಅದಕ್ಕೆ ನಿಮ್ಮ ಉತ್ತರವೇನು ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಹ್ಲಾದ್ ಜೋಷಿ ಅವರೇ, ಬಿ.ಜೆ.ಪಿ ಯ ಎಲ್ಲಾ ನಾಯಕರುಗಳಿಗೆ ಯಾವ ರೀತಿಯ ಮಾನಸಿಕ ಅಸ್ವಸ್ಥತೆ ಕಾಡುತಿದೆಯೋ ತಿಳಿಯದಾಗಿದೆ ಎಂದಿದ್ದಾರೆ.
ಕೆ ಎಸ್ ಆರ್ ಟಿ ಸಿ ಯು ಪ್ರತಿವರ್ಷ ದಸರಾ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಕಳೆದ 20 ವರುಷಗಳಿಂದ ದರ ಏರಿಕೆಯನ್ನು ಅನುಷ್ಠಾನಗೊಳಿಸುತ್ತಾ ಬಂದಿದೆ. ಆಂದರೆ ನೀವು ಹೇಳುತ್ತಿರುವ ಮಹಿಷಾಸುರ ಟ್ಯಾಕ್ಸ್ ಅನ್ನು ತಮ್ಮ ಪಕ್ಷ ಸಹ ಬಿ.ಜೆ.ಪಿ ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ್ದೀರಾಲ್ಲ ಅದಕ್ಕೆ ತಮ್ಮ ಉತ್ತರವೇನು? ಮಾಹಿತಿ ಕೊರತೆ ಇದ್ದರೆ ಸಮರ್ಪಕವಾದ ಮಾಹಿತಿ ಪಡೆದು ಮಾತನಾಡಿ, ತಾವು ಕೇಂದ್ರ ಸಚಿವ ಸ್ಥಾನದಲ್ಲಿದ್ದೀರಾ ಅದರ ಗೌರವವನ್ನಾದರೂ ಕಾಪಾಡಿ ಎಂದು ಗುಡುಗಿದ್ದಾರೆ.
ತಾವು ಜನಗಳ ಮೇಲೆ 2017-2025 ರವರೆಗೆ ಸತತ 8 ವರುಷಗಳ ಕಾಲ GST ಹೆಸರಿನಲ್ಲಿ ಟ್ಯಾಕ್ಸ್ ಹಾಕಿ ಜನರ ರಕ್ತ ಹೀರಿದಿರಿ ಅದನ್ನು ಬ್ರಹ್ಮರಾಕ್ಷಸ ಟ್ಯಾಕ್ಸ್ ಅಂತ ಕರೆಯಬಹುದೇ? GST ಟ್ಯಾಕ್ಸ್ ಮೂಲಕ ಅಮಾಯಕ ಜನರಿಂದ ವರುಷಗಳ ಕಾಲ ಸುಲಿಗೆ ಮಾಡಿದ್ದು ಮರೆತು ಬಿಟ್ಟಿರಾ? ಇದಕ್ಕಾಗಿ ಕೇಂದ್ರ ಸರ್ಕಾರ, ಬಿ.ಜೆ.ಪಿ ಪಕ್ಷ ಮತ್ತು ಅದರ ನಾಯಕರು ದೇಶದ ಜನರ ಕ್ಷಮೆ ಕೋರಬಾರದೇ? ಎಂದು ಪ್ರಶ್ನಿಸಿದ್ದಾರೆ.
ಈಗ GST ಟ್ಯಾಕ್ಸ್ ಕಡಿಮೆ ಮಾಡಿ, ಸಂಭ್ರಮ ಆಚರಣೆ ಮಾಡುವ ಮೂಲಕ ಪ್ರಚಾರ ಪಡೆಯುವ ತಮ್ಮ ನೈತಿಕತೆಯ ಬಗ್ಗೆ ಹೇಳಲಿಕ್ಕೆ ಪದಗಳು ಸಾಲದಾಗಿದೆ. ತಾವು ಇಲ್ಲಸಲ್ಲದ ಮಾಹಿತಿಯನ್ನು ಅಪಪ್ರಚಾರ ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯುವ ದುಸ್ಸಾಹಸಕ್ಕೆ ಇನ್ನಾದರೂ ಪೂರ್ಣವಿರಾಮ ಹಾಕುವಿರಾ? ಎಂದು ಕೇಳಿದ್ದಾರೆ.
@JoshiPralhad ಅವರೇ ,@BJP4Karnatakaದ ಎಲ್ಲಾ ನಾಯಕರು ಇತ್ತೀಚಿನ ದಿನಗಳಲ್ಲಿ ಯಾವ ಮನಃಸ್ಥಿತಿಯಲ್ಲಿ ನಿಯಂತ್ರಣ ಕಳೆದುಕೊಂಡು ಮಾತನಾಡುತ್ತಿದ್ದಾರೋ, ನಿಮಗೆ ತಿಳಿಯಬೇಕು.
ಕೆ ಎಸ್ ಆರ್ ಟಿ ಸಿ ಯು ಪ್ರತಿವರ್ಷ ದಸರಾ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಕಳೆದ 20 ವರುಷಗಳಿಂದ ದರ ಏರಿಕೆಯನ್ನು ಅನುಷ್ಠಾನಗೊಳಿಸುತ್ತಾ ಬಂದಿದೆ.
ಅಂದರೆ…
— Ramalinga Reddy (@RLR_BTM) September 30, 2025
ಬೆಂಗಳೂರಲ್ಲಿ ಈವರೆಗೆ 13,000 ಗುಂಡಿ ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್