Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0930/01/2025 2:34 PM

ಬೆಂಗಳೂರು : “ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಹುತಾತ್ಮ ದಿನಾಚರಣೆ ಅಂಗವಾಗಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.

“ಬಿಜೆಪಿಯವರು ಗಾಂಧಿ ಅವರ ತತ್ವಗಳನ್ನು ಬಾಯಲ್ಲಿ ಹೇಳದೇ ಇರಬಹುದು ಆದರೆ ಆಡಳಿತ ಪಕ್ಷವನ್ನು ವಿರೋಧಿಸಲು ಗಾಂಧಿ ಅವರ ಪ್ರತಿಮೆಯನ್ನೇ ಆಶ್ರಯಿಸಬೇಕು. ಧರಣಿ ಮಾಡಬೇಕು ಎಂದು ಹೇಳಿಕೊಟ್ಟವರೇ ಗಾಂಧಿ. ಗಾಂಧಿ ಅವರ ಮೌನ, ಧ್ಯಾನದ ಹಿಂದೆ ದೊಡ್ಡ ಸಂದೇಶವಿದೆ. ಸ್ವದೇಶಿ ಆಲೋಚನೆ ಹೇಳಿಕೊಟ್ಟವರು ಗಾಂಧಿ. ಪ್ರಧಾನಿ ಅವರು ಇದನ್ನೇ ಮೇಕ್ ಇನ್ ಇಂಡಿಯಾ ಎಂದು ಹೇಳುತ್ತಿದ್ದಾರೆ” ಎಂದರು.

“ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು. ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ತಂದುಕೊಟ್ಟರಲ್ಲ ಎನ್ನುವ ಅಸಹನೆ ಬಿಜೆಪಿಯವರಿಗಿದೆ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ. ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ” ಎಂದರು.

ವರ್ಷಪೂರ್ತಿ ಗಾಂಧಿ ಕಾರ್ಯಕ್ರಮ

“ಗಾಂಧಿ ಅವರ ಸಂದೇಶಗಳನ್ನು ಪ್ರಚಾರ ಮಾಡಲು ರಾಜ್ಯದಾದ್ಯಂತ ವರ್ಷಪೂರ್ತಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಕಾರ್ಯಕ್ರಮವನ್ನು ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ ಮುಂದಿದೆ. ಗಾಂಧಿ ಭಾರತ ಕಾರ್ಯಕ್ರಮ ಆಚರಣಾ ಸಮಿತಿ ನೀಡಿರುವ ವರದಿ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ ವೇಳೆ ತಿಳಿಸಬಹುದು. ಇದರ ಬಗ್ಗೆ ಎಐಸಿಸಿ ಅಧ್ಯಕ್ಷರ ಬಳಿಯೂ ಮನವಿ ಮಾಡಿದ್ದೇನೆ” ಎಂದು ಹೇಳಿದರು.

“ಮಹಾತ್ಮ ಗಾಂಧಿ ಅವರ ಆದರ್ಶಗಳನ್ನು ನಾವುಗಳು ಮನೆಯಲ್ಲಿ, ಕುಟುಂಬದಲ್ಲಿ ಪಾಲಿಸಬೆಕಾಗಿದೆ. ನನ್ನ ಜೀವನವೇ ನನ್ನ ಸಂದೇಶ ಎನ್ನುವ ಗಾಂಧಿಜಿ ಅವರ ತತ್ವವನ್ನು ಇಡೀ ಪ್ರಪಂಚದ ಉನ್ನತ ನಾಯಕರೆಲ್ಲ ಒಪ್ಪಿಕೊಂಡಿದ್ದಾರೆ. ‘ನಿಮ್ಮನ್ನು ನೀವು ನಿಯಂತ್ರಣ ಮಾಡಿಕೊಳ್ಳಬೇಕಾದರೆ ಮೆದುಳನ್ನು ಉಪಯೋಗಿಸಿ, ಬೇರೆಯವರನ್ನು ನಿಯಂತ್ರಣ ಮಾಡಬೇಕಾದರೆ ಹೃದಯನ್ನು ಬಳಸುʼ ಎಂದಿದ್ದಾರೆ. ಅಂದರೆ ಪ್ರೀತಿಯಿಂದ ಗೆಲ್ಲಬೇಕು ಎಂದು ಹೇಳಿದ್ದಾರೆ. ಜಗತ್ತನ್ನು ಬದಲಾವಣೆ ಮಾಡಬೇಕು ಎಂದು ಮೊದಲು ನಾವು ಬದಲಾವಣೆ ಆಗಬೇಕು” ಎಂದರು.

ಕಾಂಗ್ರೆಸ್ ಗೆ ಮಾತ್ರ ಸ್ವಾತಂತ್ರ್ಯ ಸಿಕ್ಕಿಲ್ಲ

“ಮಹಾತ್ಮ ಗಾಂಧಿ ಅವರ ಉಸಿರು ನಮ್ಮ ಸುತ್ತಲೇ ಇದೇ ಎನ್ನುವ ಭಾವನೆ ನನ್ನದು. ಅವರ ಪ್ರತಿಯೊಂದು ನಡೆ ನುಡಿ, ಆದರ್ಶ, ಆಶಯಗಳನ್ನು ಉಳಿಸುವ ಕೆಲಸ ನಾವು ಮಾಡುತ್ತಿದ್ದೇವೆ. ನಾವೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು. ನಮಗೆ ಇರುವ ಶಕ್ತಿ ಯಾರಿಗೂ ಇಲ್ಲ. ತ್ರಿವರ್ಣ ಧ್ವಜವನ್ನು ಬಿಜೆಪಿಯವರು ಹಾಕಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷವೊಂದಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ, ನಮಗೆ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ ಬಂದಿಲ್ಲ. ಎಲ್ಲರಿಗೂ ಇದರ ಅನುಕೂಲತೆ ಸಿಕ್ಕಿದೆ. ಎಲ್ಲರಿಗೂ ಸ್ವಾತಂತ್ರ್ಯ ಬಂದಿದೆ. ಎಲ್ಲರೂ ಸಂವಿಧಾನವನ್ನು ಬಳಸಿಕೊಂಡು ಅದರ ಫಲವನ್ನು ಕಾಣುತ್ತಿದ್ದಾರೆ” ಎಂದರು.

“ಶಿವನ ಧ್ಯಾನ, ರಾಮನ ತ್ಯಾಗ, ಬುದ್ದನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದವರು ಹಾಗೂ ಇದರ ಪ್ರತಿರೂಪವಾಗಿ ಬದುಕಿದವರು ಮಹಾತ್ಮ ಗಾಂಧಿ. ಗಾಂಧೀಜಿ ಅವರು 77 ವರ್ಷದ ಹಿಂದೆ ಹುತಾತ್ಮರಾದರು. ಅವರ ಸಲುವಾಗಿ ಮೌನಾಚರಣೆ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆಸಿದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಭಾರತದ ಇತಿಹಾಸದಲ್ಲಿಯೇ ಮಹಾತ್ಮ ಗಾಂಧೀಜಿ ಅವರು ಆದರ್ಶ, ತತ್ವಗಳನ್ನು ಉಳಿಸಲು ಮೂಲಕ ಪ್ರಯತ್ನ ಮಾಡಿದ್ದೇವೆ. ಈ ದೇಶಕ್ಕೆ ಕಾಂಗ್ರೆಸ್ ಪಕ್ಷವೇ ಭವಿಷ್ಯ” ಎಂದು ತಿಳಿಸಿದರು.

ಫೆ.2 ರಂದು ಚನ್ನಪಟ್ಟಣ ಮತದಾರರ ಅಭಿನಂದನಾ ಸಮಾವೇಶ

“ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಚನ್ನಪಟ್ಟಣ ಉಪಚುನಾವಣೆ ವೇಳ ಶ್ರಮವಹಿಸಿದ್ದೀರಿ. ಅಲ್ಲಿನ ಮತದಾರರಿಗೆ ಅಭಿನಂದನೆ ತಿಳಿಸುವ ಸಲುವಾಗಿ ಫೆ.2 ರಂದು ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಲಾಗುವುದು. ಬೆಳಗಾವಿ ಅಧಿವೇಶನವಿದ್ದ ಕಾರಣಕ್ಕೆ ಮುಂದಕ್ಕೆ ಹೋಗಿತ್ತು” ಎಂದರು.

ನೀರಿನ ದರ ಏರಿಕೆ ಅನಿವಾರ್ಯ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ವಿಚಾರವಾಗಿ ಕೇಳಿದಾಗ, “ಕಳೆದ 11 ವರ್ಷಗಳಿಂದ ನೀರಿನ ದರ ಏರಿಕೆ ಮಾಡಿಲ್ಲ. ಬಿಡ್ಬ್ಯೂಎಸ್ ಎಸ್ ಬಿಗೆ ವರ್ಷಕ್ಕೆ ಸುಮಾರು 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಆದ ಕಾರಣ ನಮ್ಮ ಮುಂದೆ ಯಾವುದೇ ಪರ್ಯಾಯ ಆಲೋಚನೆಗಳಿಲ್ಲ. ಮಂಡಳಿಯನ್ನು ಉಳಿಸಬೇಕು ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. ಜೊತೆಗೆ ನೀರಿನ ಸಂಪರ್ಕ ಜಾಲವನ್ನು ಹೆಚ್ಚು ಮಾಡಬೇಕಿದೆ ಇದಕ್ಕೆ ಸುಮಾರು 6 ಸಾವಿರ ಕೋಟಿ ಬೇಕಾಗಿದೆ. ಇದಕ್ಕಾಗಿ ಈಗಲೇ ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದರು.

ನಮ್ಮ ಪಕ್ಷ ಒಗ್ಗಟ್ಟಾಗಿದೆ

ಬಿಜೆಪಿ ಸಂಸದ ಸುಧಾಕರ್ ಪಕ್ಷದ ವಿರುದ್ದ ಬಹಿರಂಗವಾಗಿ ಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನಾನು ಬೇರೆ ಪಕ್ಷದ ವಿಚಾರದ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂತಸದ ವಿಚಾರ ಎಂದರೆ ನಮ್ಮ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿದೆ, ಒಟ್ಟಾಗಿ ಕೆಲಸ ಮಾಡುತ್ತಿದೆ” ಎಂದರು.

ಈಗ ‘ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ಅರ್ಜಿಸಲ್ಲಿಕೆ ಮತ್ತಷ್ಟು ಸರಳ: ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ಸಲ್ಲಿಸಿ | Karnataka Chief Minister Relief Fund

ಡಿಜಿಟಲ್ ಪಾವತಿ ವರ್ಷದಿಂದ ವರ್ಷಕ್ಕೆ ಎರಡಂಕಿ ಏರಿಕೆ: RBI | Digital Payments

Share. Facebook Twitter LinkedIn WhatsApp Email

Related Posts

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM1 Min Read

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM1 Min Read
Recent News

ಈ ವಿಟಮಿನ್ ಕೊರತೆಯಿದ್ರೆ ನಿಮಗೆ ನಿದ್ದೆ ಬರುವುದಿಲ್ಲ ; ನೀವಿದನ್ನ ಈ ರೀತಿ ಭರ್ತಿ ಮಾಡಿ!

26/08/2025 10:05 PM

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

26/08/2025 9:53 PM

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ, ಬೆಲ್ಲ ಒಟ್ಟಿಗೆ ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ತಿಳಿದ್ರೆ, ನೀವಿದನ್ನ ಬಿಡೋದಿಲ್ಲ

26/08/2025 9:44 PM
State News
KARNATAKA

ಫೆ.3, 2026ರಂದು ಸಾಗರದ ‘ಮಾರಿಕಾಂಬಾ ದೇವಿ ಜಾತ್ರೆ’ ನಿಗದಿ: ಅಧ್ಯಕ್ಷ ಕೆ.ಎನ್ ನಾಗೇಂದ್ರ

By kannadanewsnow0926/08/2025 9:53 PM KARNATAKA 1 Min Read

ಶಿವಮೊಗ್ಗ : ಸಾಗರದ ಇತಿಹಾಸ ಪ್ರಸಿದ್ದವಾದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ.3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ…

ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

26/08/2025 9:46 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

26/08/2025 9:30 PM

BREAKING: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಶಾಕ್: ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಆದೇಶ

26/08/2025 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.