Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಮಾನ್ಯ ಶೀತ ಎಂದೆಣಿಸದಿರಿ! ಮಾರಣಾಂತಿಕ ಕ್ಯಾನ್ಸರ್‌ಗೆ ಇರಬಹುದು ಇವೇ ಮೊದಲ ಲಕ್ಷಣಗಳು !

09/11/2025 9:14 AM

ಏನಿದು GPS ಸ್ಪೂಫಿಂಗ್? ದೆಹಲಿ ಏರ್‌ಪೋರ್ಟ್‌ನಲ್ಲಿ 800+ ವಿಮಾನಗಳ ಹಾರಾಟಕ್ಕೆ ಅಡ್ಡಿ: ATC ವ್ಯವಸ್ಥೆಗೆ ಬೇಕಿದೆ ಸರ್ಜರಿ!

09/11/2025 9:05 AM

ALERT : ಆನ್ ಲೈನ್ ನಲ್ಲಿ `ಚಿನ್ನ’ ಖರೀದಿಸುವ ಹೂಡಿಕೆದಾರರಿಗೆ `ಸೆಬಿ’ ನೀಡಿದೆ ಈ ಎಚ್ಚರಿಕೆ.!

09/11/2025 9:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಸಚಿವ ಪ್ರಿಯಾಂಕ್ ಖರ್ಗೆ
KARNATAKA

ಬಿಜೆಪಿಯ ಆತ್ಮವಂಚನೆಯ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0901/10/2025 2:46 PM

ಬೆಂಗಳೂರು: ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ” ಎಕ್ಸ್ ” ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಮೇತ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ಆಡಳಿತವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದು ಮಂತ್ರಿ ಸ್ಥಾನವನ್ನು ಕೊಟ್ಟಿರಲಿಲ್ಲ, ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆ ಹಾಕುತ್ತಿರಲಿಲ್ಲ, ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ಮಟ್ಟದ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ಕಲಬುರಗಿಯ ಜನರ ಸಂಕಷ್ಟಕ್ಕೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

– 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.
– 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.
– 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.
– 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.
– ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿ ಹೆಚ್ಚು ಬೆಳೆ ವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

– 2023 – 24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.
– 2024-25 ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.
– ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.
– ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ.

ಹಾಗೆಯೇ, ಹೆಚ್ಚು ಇನ್ ಪುಟ್ ಸಬ್ಸಿಡಿಯನ್ನು ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ, ಎರಡು ವರ್ಷಗಳಲ್ಲಿ 3,49,555 ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಲಾಗಿದೆ.
ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ರೈತರು ಫಲಾನುಭವಿಗಳಾಗಿದ್ದಾರೆ, ₹1,417.02 ಕೋಟಿ ಹಣ ರೈತರ ಕೈ ಸೇರಿದೆ.

ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ, ಬಿಜೆಪಿಯವರ ನಕಲಿ ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು, ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

Share. Facebook Twitter LinkedIn WhatsApp Email

Related Posts

ತಾರಾಬಲ ಏಕೆ ನೋಡಬೇಕು? ಹೀಗಿದೆ ತಾರಾಬಲ ನೋಡುವ ಕ್ರಮ

09/11/2025 8:39 AM3 Mins Read

ಶಿವಮೊಗ್ಗ ‘KUWJ ಸಂಘ’ದ ಅಧ್ಯಕ್ಷರಾಗಿ ವೈದ್ಯ, ಪ್ರಧಾನ ಕಾರ್ಯದರ್ಶಿಯಾಗಿ ಹಾಲಸ್ಬಾಮಿ, ರಾಜ್ಯ ಸಮಿತಿಗೆ ಶಿವಕುಮಾರ್ ಅವಿರೋಧವಾಗಿ ಆಯ್ಕೆ

09/11/2025 8:30 AM1 Min Read

Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ

09/11/2025 8:17 AM1 Min Read
Recent News

ಸಾಮಾನ್ಯ ಶೀತ ಎಂದೆಣಿಸದಿರಿ! ಮಾರಣಾಂತಿಕ ಕ್ಯಾನ್ಸರ್‌ಗೆ ಇರಬಹುದು ಇವೇ ಮೊದಲ ಲಕ್ಷಣಗಳು !

09/11/2025 9:14 AM

ಏನಿದು GPS ಸ್ಪೂಫಿಂಗ್? ದೆಹಲಿ ಏರ್‌ಪೋರ್ಟ್‌ನಲ್ಲಿ 800+ ವಿಮಾನಗಳ ಹಾರಾಟಕ್ಕೆ ಅಡ್ಡಿ: ATC ವ್ಯವಸ್ಥೆಗೆ ಬೇಕಿದೆ ಸರ್ಜರಿ!

09/11/2025 9:05 AM

ALERT : ಆನ್ ಲೈನ್ ನಲ್ಲಿ `ಚಿನ್ನ’ ಖರೀದಿಸುವ ಹೂಡಿಕೆದಾರರಿಗೆ `ಸೆಬಿ’ ನೀಡಿದೆ ಈ ಎಚ್ಚರಿಕೆ.!

09/11/2025 9:02 AM

BREAKING : `DNA’ ಕಂಡುಹಿಡಿದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ `ಜೇಮ್ಸ್ ಡಿ. ವ್ಯಾಟ್ಸನ್’ ನಿಧನ | James D. Watson passes away

09/11/2025 8:45 AM
State News
KARNATAKA

ತಾರಾಬಲ ಏಕೆ ನೋಡಬೇಕು? ಹೀಗಿದೆ ತಾರಾಬಲ ನೋಡುವ ಕ್ರಮ

By kannadanewsnow5709/11/2025 8:39 AM KARNATAKA 3 Mins Read

ಪ್ರಪಂಚ ನಿಂತಿರುವುದು ನಂಬಿಕೆಯ ಮೇಲೆ ಹಾಗೆ ಭಾರತೀಯರ ನಂಬಿಕೆಗೆ ಪಾತ್ರವಾಗಿರುವ ಶಾಸ್ತ್ರವೇ ಜ್ಯೋತಿಷ್ಯ ಶಾಸ್ತ್ರ. ಪುರಾತನ ಕಾಲದಿಂದಲೂ ಭವಿಷ್ಯವನ್ನು ತಿಳಿಯಲು…

ಶಿವಮೊಗ್ಗ ‘KUWJ ಸಂಘ’ದ ಅಧ್ಯಕ್ಷರಾಗಿ ವೈದ್ಯ, ಪ್ರಧಾನ ಕಾರ್ಯದರ್ಶಿಯಾಗಿ ಹಾಲಸ್ಬಾಮಿ, ರಾಜ್ಯ ಸಮಿತಿಗೆ ಶಿವಕುಮಾರ್ ಅವಿರೋಧವಾಗಿ ಆಯ್ಕೆ

09/11/2025 8:30 AM

Fact Check : ಕಬ್ಬು ಬೆಳೆಗಾರರ ಮೇಲೆ ಲಾಠಿಚಾರ್ಜ್, ಪ್ರತಿಯಾಗಿ ಕಲ್ಲು ತೂರಾಟ? ಹೀಗಿದೆ ರಾಜ್ಯ ಸರ್ಕಾರದ ಸ್ಪಷ್ಟನೆ

09/11/2025 8:17 AM

ರಾಜ್ಯದ `ರೈತರಿಗೆ ಗುಡ್ ನ್ಯೂಸ್’ : ಎಲ್ಲಾ ಕಬ್ಬಿಗೂ ಟನ್ ಗೆ ಹೆಚ್ಚುವರಿ 100 ರೂ. ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ

09/11/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.