ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲೇ ಪ್ರಯಾಣಿಕರೊಬ್ಬರ ಜೊತೆಗೆ ನಿರ್ವಾಹಕರೊಬ್ಬರು ಅನುಚಿತವಾಗಿ ವರ್ತಿಸಿದ್ದ ಬಗ್ಗೆ ವರದಿಯಾಗಿತ್ತು. ಈ ಸುದ್ದಿ ಪ್ರಸಾದ ಬೆನ್ನಲ್ಲೇ ಬಿಎಂಟಿಸಿ ನಿರ್ವಾಹಕನನ್ನು ಅಮಾನತುಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ನೀಡಿದ್ದು, ದಿನಾಂಕ 06-08-2024 ರಂದು ಬೆಂಮಸಾಸಂಸ್ಥೆಯ ಘಟಕ – 32 (ಸೂರ್ಯ ಸಿಟಿ) ರ ನಿರ್ವಾಹಕರು ಮಾರ್ಗ ಸಂಖ್ಯೆ ಇವಿ 500 ಡಿಸಿ/7 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಸಮಯ ಸುಮಾರು ರಾತ್ರಿ 09:40 ಗಂಟೆಗೆ, ಸದರಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಭಿನವ್ ರಾಜ್ ಎಂಬುವರು ಬಾಕಿ ರೂ.5 ಚಿಲ್ಲರೆ ವಾಪಸ್ಸು ನೀಡುವಂತೆ ಕೋರಿದಾಗ, ಸದರಿ ನಿರ್ವಾಹಕರು ಸಾರ್ವಜನಿಕ ಪ್ರಯಾಣಿಕರ ಎದುರು ಅನುಚಿತವಾಗಿ ವರ್ತಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಸದರಿ ನಿರ್ವಾಹಕರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡಲಾಗಿದೆ ಎಂದು ತಿಳಿಸಿದೆ.
ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವುದಲ್ಲದೇ, ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುವುದು ಸುರಕ್ಷಿತ ಎನ್ನುವ ಭಾವನೆ ಉಂಟಾಗಲು ಅಗತ್ಯವಿರುವ ಕ್ರಮಗಳನ್ನು ಸಹ ಕೈಗೊಳ್ಳಲಾಗಿರುತ್ತದೆ. ಪ್ರಯಾಣಿಕರ ಮೇಲೆ ಯಾವುದೇ ತರಹದ ದೌರ್ಜನ್ಯ, ಅಸಭ್ಯ ವರ್ತನೆ ಮತ್ತು ಅಹಿತಕರ ಘಟನೆಗಳು ಕಂಡುಬಂದಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದೆ.
ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರಲ್ಲಿ ಲಾರಿ ಚಾಲಕರ ಡಿಎಲ್ ಪರಿಶೀಲಿಸಲು ‘RTO’ಗಳಿಗೆ ಸೂಚಿಸಿ: ಸಿಎಂಗೆ ‘ರಮೇಶ್ ಬಾಬು’ ಪತ್ರ