Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಎಂಟಿಸಿ ತನಿಖಾ ತಂಡದ ಭರ್ಜರಿ ಕಾರ್ಯಾಚರಣೆ: ಫೆಬ್ರವರಿಯಲ್ಲಿ 2,546 ಪ್ರಯಾಣಿಕರಿಂದ 5.31 ಲಕ್ಷ ದಂಡ ವಸೂಲಿ

18/03/2026 4:03 PM

‘X ಡಿಸ್‌ಲೈಕ್’ ಬಟನ್ ವಿವಾದ: ನೆಟ್ಟಿಗರ ಫೀಡ್‌ಬ್ಯಾಕ್‌ಗೆ ಈ ಉತ್ತರ ಕೊಟ್ಟ ‘ನಿಕಿತಾ ಬೈರ್’

18/03/2026 3:57 PM

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

18/03/2026 3:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆದುಕೊಳ್ಳುವಂತೆ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಮನವಿ
KARNATAKA

ಬ್ರಾಹ್ಮಣ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆದುಕೊಳ್ಳುವಂತೆ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಮನವಿ

By kannadanewsnow0904/10/2025 9:38 PM

ಶಿವಮೊಗ್ಗ : ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಸಮುದಾಯದವರು ಸೌಲಭ್ಯ ಪಡೆಯಲು ಹಿಂದೇಟು ಹಾಕಬಾರದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ನಿರ್ದೇಶಕ ಪಿ.ಎಂ.ಮಾಲತೇಶ್ ಹೇಳಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡಳಿ ಮೂಲಕ ಸರ್ಕಾರ ಜಾರಿಗೆ ತಂದಿರುವ ಯೋಜನೆ ಪಡೆಯಲು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಲು ಮನವಿ ಮಾಡಿದರು.

ಪ್ರಮುಖವಾಗಿ ಪಿಯುಸಿಯಿಂದ ಪದವಿವರೆಗೆ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸಾಂದೀಪಿನಿ ಶಿಷ್ಯ ವೇತನ ಯೋಜನೆಯಡಿ 15ಸಾವಿರ ರೂ. ನಿರ್ವಹಣಾ ವೆಚ್ಚ ನೀಡುತ್ತಿದ್ದು, ಅರ್ಹ ವಿಪ್ರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಆಧಾರ್ ಕಾರ್ಡ್ ಮತ್ತು ಇಡಬ್ಲೂö್ಯಎಸ್ ಸಂಖ್ಯೆಯನ್ನು ನಮೂದಿಸಬೇಕು. ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸಹ ಧನ ಸಹಾಯ ನೀಡಲಾಗುತ್ತದೆ. ವಿದ್ಯಾರ್ಥಿಗಳು ದಿನಾಂಕ 30-11-2025ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದರು.

ಯೋಜನೆಯಡಿ 450 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು ಈತನಕ ಸುಮಾರು 6.50 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿಯಲ್ಲಿ ಯುಪಿಎಸ್‌ಸಿ, ಐಎಎಸ್ ಹಾಗೂ ರಾಜ್ಯ ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ಪೂರ್ವಭಾವಿ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಯುವಕ ಮತ್ತು ಯುವತಿಯರಿಗೆ ಸಣ್ಣ ಪ್ರಮಾಣದಲ್ಲಿ ಗೃಹ ಉದ್ಯಮ ನಡೆಸಲು ರೂ. 2ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ. ಸಾಲಕ್ಕೆ ಶೇ. 20 ಸಹಾಯಧನ ಇದ್ದು, ಶೇ. 4 ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಅ. 30ರೊಳಗೆ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಮಂಡಳಿಯಿಂದ ಬ್ರಾಹ್ಮಣ ಸಮುದಾಯದ ಶ್ರೇಯೋಭಿವೃದ್ದಿಗೆ ಪೂರಕವಾದ ಅನೇಕ ಯೋಜನೆಗಳ ಮನವಿ ನೀಡಲಾಗಿದೆ ಎಂದರು.

ಈ ಸುದ್ದಿಗೋಷ್ಟಿಯಲ್ಲಿ ಮಾ.ಸ.ನಂಜುಂಡಸ್ವಾಮಿ, ಚೂಡಾಮಣಿ ರಾಮಚಂದ್ರ, ನಾರಾಯಣಮೂರ್ತಿ ಕಾನುಗೋಡು, ಐ.ವಿ.ಹೆಗಡೆ, ನವೀನ್ ಜೋಯ್ಸ್, ಬದರಿನಾಥ್, ವಿನಾಯಕ ಜೋಯ್ಸ್, ಗೋಪಿ ದೀಕ್ಷಿತ್, ವೆಂಕಟೇಶ್, ಆರ್.ಎಸ್.ಹೆಗಡೆ, ನೇತ್ರಾ ಉಡುಪ, ವಿನೋದಾ, ಪುಷ್ಪ, ನಿರ್ಮಲಾ, ವೆಂಕಟೇಶ್ ಇನ್ನಿತರರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

ಬಿಎಂಟಿಸಿ ತನಿಖಾ ತಂಡದ ಭರ್ಜರಿ ಕಾರ್ಯಾಚರಣೆ: ಫೆಬ್ರವರಿಯಲ್ಲಿ 2,546 ಪ್ರಯಾಣಿಕರಿಂದ 5.31 ಲಕ್ಷ ದಂಡ ವಸೂಲಿ

18/03/2026 4:03 PM1 Min Read

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

18/03/2026 3:54 PM1 Min Read

BREAKING : ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್ : 40 ಕುಟುಂಬಗಳಿಗೆ ನಿವೇಶನ ಪತ್ರ ಹಂಚಿಕೆ

18/03/2026 3:44 PM1 Min Read
Recent News

ಬಿಎಂಟಿಸಿ ತನಿಖಾ ತಂಡದ ಭರ್ಜರಿ ಕಾರ್ಯಾಚರಣೆ: ಫೆಬ್ರವರಿಯಲ್ಲಿ 2,546 ಪ್ರಯಾಣಿಕರಿಂದ 5.31 ಲಕ್ಷ ದಂಡ ವಸೂಲಿ

18/03/2026 4:03 PM

‘X ಡಿಸ್‌ಲೈಕ್’ ಬಟನ್ ವಿವಾದ: ನೆಟ್ಟಿಗರ ಫೀಡ್‌ಬ್ಯಾಕ್‌ಗೆ ಈ ಉತ್ತರ ಕೊಟ್ಟ ‘ನಿಕಿತಾ ಬೈರ್’

18/03/2026 3:57 PM

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

18/03/2026 3:54 PM

“ನಮ್ಮನ್ನು ಪ್ರೀತಿಸಿ, ಮೋದಿಜಿಯನ್ನ ಮದುವೆಯಾದ್ರು” ; ರಾಜ್ಯಸಭೆಯಲ್ಲಿ ದೇವೇಗೌಡರ ಕಾಲೇಳೆದ ಖರ್ಗೆ, ಮುಗುಳ್ನಕ್ಕ ‘ಮೋದಿ’

18/03/2026 3:53 PM
State News
KARNATAKA

ಬಿಎಂಟಿಸಿ ತನಿಖಾ ತಂಡದ ಭರ್ಜರಿ ಕಾರ್ಯಾಚರಣೆ: ಫೆಬ್ರವರಿಯಲ್ಲಿ 2,546 ಪ್ರಯಾಣಿಕರಿಂದ 5.31 ಲಕ್ಷ ದಂಡ ವಸೂಲಿ

By kannadanewsnow0918/03/2026 4:03 PM KARNATAKA 1 Min Read

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಆದಾಯ ಸೋರಿಕೆಯನ್ನು ತಡೆಗಟ್ಟಲು ಸಂಸ್ಥೆಯ ತನಿಖಾ ತಂಡಗಳು ಫೆಬ್ರವರಿ 2026ರಲ್ಲಿ ನಗರದಾದ್ಯಂತ…

ಚಿತ್ರದುರ್ಗದ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

18/03/2026 3:54 PM

BREAKING : ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್ : 40 ಕುಟುಂಬಗಳಿಗೆ ನಿವೇಶನ ಪತ್ರ ಹಂಚಿಕೆ

18/03/2026 3:44 PM

ವೈಷ್ಣೋದೇವಿ ಯಾತ್ರಿಗಳಿಗೆ ಸಿಹಿ ಸುದ್ದಿ: ತಲಾ 5,000 ಸಹಾಯಧನ ಘೋಷಿಸಿದ ಸಚಿವ ರಾಮಲಿಂಗಾರೆಡ್ಡಿ!

18/03/2026 3:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.