ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಗುರುದ್ವಾರ ಕಾರ್ಟೆ ಪರ್ವಾನ್‌ನ ಗೇಟ್ ಬಳಿ ಬಾಂಬ್​ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸಿಖ್ ಮತ್ತು ಹಿಂದೂ ಸಮುದಾಯಗಳ ಸದಸ್ಯರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಇಂಡಿಯನ್ ವರ್ಲ್ಡ್ ಫೋರಂನ ಅಧ್ಯಕ್ಷ ಪುನೀತ್ ಸಿಂಗ್ ಚಾಂಧೋಕ್ ಹೇಳಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.

ಜೂನ್‌ನಲ್ಲಿ ಕಾಬೂಲ್‌ನ ಬಾಗ್-ಎ ಬಾಲಾ ನೆರೆಹೊರೆಯಲ್ಲಿರುವ ಗುರುದ್ವಾರ ಕಾರ್ಟೆ ಪರ್ವಾನ್‌ನಲ್ಲಿ ಹಲವು ಸ್ಫೋಟಗಳು ಸಂಭವಿಸಿದ್ದವು. ಈ ದಾಳಿ ನಡೆದ ಒಂದು ತಿಂಗಳಲ್ಲಿ ದಾಳಿ ನಡೆದಿದೆ.

ಕಳೆದ ತಿಂಗಳು ನಡೆದ ದಾಳಿಯಲ್ಲಿ ಒಬ್ಬ ಸಿಖ್ ಸಮುದಾಯದ ಸದಸ್ಯ ಸೇರಿದಂತೆ ಇಬ್ಬರನ್ನು ಸಾವನ್ನಪ್ಪಿದ್ದರು. ಈ ಭಯೋತ್ಪಾದಕ ದಾಳಿಯ ಹೊಣೆಯನ್ನುಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು.

BREAKING NEWS : ತಿಹಾರ್ ಜೈಲಿನಲ್ಲಿ ಉಪವಾಸ ಕೂತಿದ್ದ ಭಯೋತ್ಪಾದಕ ‘ಯಾಸಿನ್ ಮಲಿಕ್’ ಆಸ್ಪತ್ರೆಗೆ ದಾಖಲು

Share.
Exit mobile version