Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ತಮಿಳುನಾಡು ರಾಜಕೀಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿ ಗೆಲ್ಲಿಸಿ: ಜೆಪಿ ನಡ್ಡಾ
KARNATAKA

ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿ ಗೆಲ್ಲಿಸಿ: ಜೆಪಿ ನಡ್ಡಾ

By kannadanewsnow09

ಹಾವೇರಿ: ಪ್ರಧಾನಿ ನರೇಂದ್ರ‌ಮೋದಿಯವರ ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ ನೀಡಿದ್ದಾರೆ.

ಅವರು ಇಂದು ಬ್ಯಾಡಗಿಯಲ್ಲಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಬೃಹತ್ ರೋಡ್ ಶೋ‌ ನಡೆಸಿ ಮಾತನಾಡಿದರು. ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿಯವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ವಿಕಸಿತ ಭಾರತ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು.

ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನಿಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೆ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೆ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು.

ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಇಂಡಿ ಒಕ್ಕೂಟ ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್ ಯಾವಾಗಲೂ ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುತ್ತ ಬಂದಿದ್ದಾರೆ. ಅಗಸ್ಟಾ ವೆಂಸ್ಟ್ ಲ್ಯಾಂಡ್ ಹಗರಣ, ಅಕ್ಕಿ ಹಗರಣ, ಟುಜಿ ಹಗರಣ, ಮಮತಾ, ಅಕಿಲೇಶ್ ಯಾದವ್ ಡಿಎಂಕೆ ನಾಯಕರು ಎಲ್ಲರೂ ಭ್ರಷ್ಟಾಚಾರ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಕೂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದರು.

ಬೇಲ್‌ಮೇಲೆ ನಾಯಕರು

ಇಂಡಿ ಒಕ್ಕೂಟದ ಬಹುತೇಕ ನಾಯಕರು ಬೇಲ್ ಮೇಲೆ‌ ಇದ್ದಾರೆ. ಕಾಂಗ್ರೆಸ್ ನಾಯಕಿ ಸೊನಿಯಾ ಗಾಂಧಿ, ರಾಹುಲ್ ರಾಹುಲ್ ಗಾಂಧಿ, ಕಾರ್ತಿ ಚಿದಂಬರ್, ಲಾಲು ಪ್ರಸಾದ್, ಡಿಕೆ ಶಿವಕುಮಾರ್ ಎಲ್ಲರೂ ಬೇಲ್ ಮೇಲೆ ಇದ್ದಾರೆ. ಅರವಿಂದ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ. ಇಂತಹ ನಾಯಕರು ನಮಗೆ ಬೇಕಾ ಎಂದು ಪ್ರಶ್ನಿಸಿದರು.

ಈ ಬಾರಿ ಕೇಂದ್ರದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಎಲ್ಲರೂ ಬಿಜೆಪಿಗೆ ಮತ ಹಾಕಿ ಬಸವರಾಜ ಬೊಮ್ಮಾಯಿಯವರನ್ನು ಸಂಸದರನ್ನಾಗಿ ಮಾಡಿ ದೆಹಲಿಗೆ ಕಳುಹಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಬಿ.ಸಿ.ಪಾಟೀಲ್ ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಜೆ.ಪಿ.ನಡ್ಡಾ ಅವರು, ಕಾಗಿನೆಲೆ ಗುರು ಪೀಠಕ್ಕೆ ಭೇಟಿ ನೀಡಿ, ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೋರ್ವಾದ ಪಡೆದುಕೊಂಡರು.

BREAKING : ‘ಟಿ20 ವಿಶ್ವಕಪ್’ಗೆ ಬಲಿಷ್ಠ ಭಾರತ ತಂಡ ಪ್ರಕಟ ; ‘ರೋಹಿತ್ ಶರ್ಮಾ’ಗೆ ನಾಯಕತ್ವ, ಕನ್ನಡಿಗ ಕೆ.ಎಲ್ ರಾಹುಲ್ ಔಟ್

BREAKING: ಕರ್ನಾಟಕದಲ್ಲೂ ‘ಪತಂಜಲಿ ಉತ್ಪನ್ನ’ ನಿಷೇಧ.?: ಗುಣಮಟ್ಟ ಪರೀಕ್ಷೆಗೆ ‘ಸಚಿವ ದಿನೇಶ್ ಗುಂಡೂರಾವ್’ ಆದೇಶ

Share. Facebook Twitter LinkedIn WhatsApp Email

Related Posts

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

2 Mins Read
Recent News

BIG BREAKING: ತಮಿಳುನಾಡು ರಾಜಕೀಕ್ಕೆ ಬಿಗ್ ಟ್ವಿಸ್ಟ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿವಿಕೆ | Tamil Nadu Government Formation

ವಿಜಯ್ ಪರ ನಿಂತ ಪ್ರಕಾಶ್ ರೈ, ಶಂತನು: ‘ಜನಾದೇಶಕ್ಕೆ ಗೌರವ ನೀಡಿ’ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಗಣಿತದಲ್ಲಿ ಕಡಿಮೆ ಅಂಕ, ವಿಜ್ಞಾನದಲ್ಲಿ ಟಾಪ್! ವೈರಲ್ ಆಯ್ತು ‘ದಳಪತಿ’ ವಿಜಯ್ 10ನೇ ತರಗತಿ ಅಂಕಪಟ್ಟಿ | Vijay

State News
KARNATAKA

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

By kannadanewsnow09 KARNATAKA 2 Mins Read

ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು…

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

ಬೆಂಗಳೂರು ಗ್ರಾಹಕರ ಗಮನಕ್ಕೆ: ಭಾನುವಾರ ನಗರದ ಈ ಪ್ರದೇಶಗಳಲ್ಲಿ 10 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ | Power Cut

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.