ಮಂಡ್ಯ : ವಿಚಾರಣೆ ನೆಪದಲ್ಲಿ ಮಹಿಳೆಯನ್ನು ಠಾಣೆಗೆ ಕರೆತಂದು ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿ ಥಳಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯ ಪೂರ್ವ ಠಾಣೆ ಪಿಎಸ್ಐ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿ ಬಂದಿದೆ.
ಮಂಡ್ಯ ಪೂರ್ವ ಠಾಣೆಯ ಪಿ ಎಸ್ ಐ ಅಯ್ಯನಗೌಡ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮಂಡ್ಯ ನಗರದ ರೂಪಾದೇವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ರೂಪ ಎಂಬುವರ ಹಸು ಅಡ್ಡ ಬಂದು ಲೇಡಿ ಕಾನ್ಸ್ಟೇಬಲ್ ಸ್ಕೂಟಿ ಇಂದ ಬಿದ್ದು ಗಾಯಗೊಂಡಿದ್ದರು.
ಪರಿಹಾರ ನೀಡುವಂತೆ ಮಹಿಳಾ ಪೇದೆ ರೂಪಾದೇವಿಗೆ ಒತ್ತಡ ಹೇರಿದ್ದಾರೆ. ಹಣ ನೀಡಿದ್ದಕ್ಕೆ ವಿಚಾರಣೆ ನೆಪದಲ್ಲಿ ರೂಪ ದೇವಿಯನ್ನು ಠಾಣೆಗೆ ಕರೆಸಿ ಥಳಿಸಿದ್ದಾರೆ. ಪೊಲೀಸರ ಥಳಿತದಿಂದ ಮಹಿಳೆಗೆ ಗಂಭೀರವಾದಂತಹ ಗಾಯಗಳಾಗಿವೆ. ಸದ್ಯ ಮಹಿಳೆಯನ್ನು ಮಂಡ್ಯ ಮೀನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.