ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ನೀಡಿದೆ.
ಈ ವಿಚಾರ ತಿಳಿದು ಪರಪ್ಪನ ಅಗ್ರಹಾರ ಜೈಲಲ್ಲಿರುವ A1 ಆರೋಪಿ ಪವಿತ್ರಾಗೌಡ ಸಹ ಕೈದಿಗಳ ಜೊತೆಗೆ ಖುಷಿ ಹಂಚಿಕೊಂಡು ಆನಂದ ಭಾಷ್ಪ ಸುರಿಸಿದ್ದಾರೆ. ಈ ವೇಳೆ ಅವರ ಪರ ವಕೀಲೆ ಶಿಲ್ಪಾ ಅವರು, ಸೋಮವಾರ ಪವಿತ್ರಾಗೌಡ ಜೈಲಿನಿಂದ ಬಿಡುಗಡೆ ಆಗುತ್ತಾರೆ. ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಕ್ಕ ಕೂಡಲೇ ಜೈಲಿನ ಮುಖ್ಯ ಅಧಿಕಾರಿಗಳಿಗೆ ತಲುಪಿಸಲಾಗುತ್ತೆ. ಸೋಮವಾರ ಜೈಲಿಂದ ಅವರು ರಿಲೀಸ್ ಆಗ್ತಾರೆ ಎಂದು ತಿಳಿಸಿದರು.