ರಾಯಚೂರು : ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪದ ಹಿನ್ನೆಲೆಯಲ್ಲಿ, ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್ ನನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ.
ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ ಅಮಾನತುಗೊಳಿಸಲಾಗಿದೆ.ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದ್ದು, 2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದೆ.
ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ.ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವೆಂಕಟೇಶ ಎನ್ನುವ ಅಧಿಕಾರಿಯನ್ನು ಇದೀಗ ಅಮಾನತು ಮಾಡಲಾಗಿದೆ.