ಜಮ್ಮುಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 10 ಯಾತ್ರಾರ್ಥಿಗಳು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ಶಿವಖೋಡಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಈ ವೇಳೆ ತಕ್ಷಣ ತಳಕ್ಕೆ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ವೇಳೆ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಬಲವರ್ಧನೆಯು ಸ್ಥಳಕ್ಕೆ ಧಾವಿಸಿತು. ದಾಳಿ ನಡೆಸಿದ್ದರಿಂದ ಈ ಪ್ರದೇಶವು ಇದೀಗ ಉದ್ವಿಗ್ನವಾಗಿದೆ, ಸಾವುನೋವುಗಳ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಮಾಹಿತಿ ನೀಡಲಿದ್ದಾರೆ.