ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಾದ ಅಭಿಷೇಕ್,ವೀ ರೇಶ್ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಬುಧವಾರ ಬಂಧಿಸುವಲ್ಲಿ ಮಂಡ್ಯ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹುಣ್ಣನದೊಡ್ಡಿಯ ಕುಮಾರ್, ಪಾಂಡವಪುರದ ಮೀನಾ, ಚಿನಕುರಳಿ ಗ್ರಾಮದ ರತ್ನಮ್ಮ, ಕಾಳೇನಹಳ್ಳಿಯ ಮಲ್ಲಿಕಾರ್ಜುನ, ಮೈಸೂರು ಜಿಲ್ಲೆಯ ಬೆಟ್ಟದಪುರದ ಪುಟ್ಟರಾಜು ಮತ್ತು ಸೋಮಶೇಖರ್, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಶಾರದಮ್ಮ ಮತ್ತು ದಾಸೇಗೌಡ, ಕಾಳೇನಹಳ್ಳಿಯ ಲ್ಯಾಬ್ ಸತ್ಯ, ಬೆಂಗಳೂರು ನಗರ ರಾಜಾಜಿನಗರದ ಪ್ರೇಮಾ ಬಂಧಿತ ಆರೋಪಿಗಳಾಗಿದ್ದಾರೆ.