BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 14 ಜನ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಯಾದಗಿರಿ : ಯಾದಗಿರಿಯಲ್ಲಿ ಘೋರ ದುರಂತವೊಂದು ನಡೆದಿದ್ದು. ಕಲುಷಿತ ನೀರು ಸೇವಿಸಿ ಸುಮಾರು 14 ಜನರು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮೂದನೂರು ಗ್ರಾಮದಲ್ಲಿ ನಡೆದಿದೆ. ವಾಂತಿ, ಭೇದಿಯಿಂದ ಜನರು ಅಸ್ವಸ್ಥಗೊಂಡಿದ್ದು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿದ ಪರಿಣಾಮ 14 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಸ್ಪತ್ರೆಗೆ ಟಿಎಚ್ಓ ಡಾ.ಆರ್.ವಿ.ನಾಯಕ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.