ಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ವಿಧಾನಸಭೆಯಲ್ಲಿ ನಿನ್ನೆಯಿಂದ ಗದ್ದಲ ಕೋಲಾಹಲ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಮತ್ತು ಕೋಲಾರಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಿರುವಂತಹ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶಿಸಿದ್ದಾರೆ.
ದೊಡ್ಡನಗೌಡ ಪಾಟೀಲ್, ಅಶ್ವಥ್ ನಾರಾಯಣ್, ಭರತ್ ಶೆಟ್ಟಿ, ಶರಣು ಸಲಗರ್, ಬಿ ಸುರೇಶ್ ಗೌಡ, ಮುನಿರತ್ನ, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಬಿಪಿ ಹರೀಶ್, ಧೀರಜ್ ಮುನಿರಾಜು, ಶೈಲೆಂದ್ರ ಬೆಲ್ದಾಳೆ, ಬಸವರಾಜ್ ಮತ್ತಿಮೂಡ್, ಯಶ್ ಪಾಲ್ ಸುವರ್ಣ, ಚಂದ್ರು ಲಮಾಣಿ, ಭೈರತಿ ಬಸವರಾಜ್ ಚನ್ನಬಸಪ್ಪ, ಅಮಾನತು ಅದಂತ ಶಾಸಕರು. ಶಾಸಕರನ್ನು ಅಮಾನತು ಆದ ಮೇಲೆ ಕೆಲಕಾಲ ಕಲಾಪವನ್ನು ಮುಂದೂಡಲಾಯಿತು.