Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

30/04/2026 11:06 AM

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2025ನೇ ಸಾಲಿನ `ಮುಖ್ಯಮಂತ್ರಿಗಳ ಪೊಲೀಸ್ ಪದಕ’ ಪ್ರಕಟ: ರಾಜ್ಯದ 153 ಅಧಿಕಾರಿ, ಸಿಬ್ಬಂದಿಗೆ ಗೌರವ !
KARNATAKA

BREAKING : 2025ನೇ ಸಾಲಿನ `ಮುಖ್ಯಮಂತ್ರಿಗಳ ಪೊಲೀಸ್ ಪದಕ’ ಪ್ರಕಟ: ರಾಜ್ಯದ 153 ಅಧಿಕಾರಿ, ಸಿಬ್ಬಂದಿಗೆ ಗೌರವ !

By kannadanewsnow5728/03/2026 7:23 AM

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 153 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮುಖ್ಯಮಂತ್ರಿಗಳ ಪೊಲೀಸ್ ಪದಕ’ವನ್ನು ಪ್ರಕಟಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ (ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಅವರು ಮಾರ್ಚ್ 27ರಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಪುರಸ್ಕೃತರು:

ಈ ಬಾರಿಯ ಪುರಸ್ಕೃತರ ಪಟ್ಟಿಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಿಂದ ಹಿಡಿದು ಕಾನ್ಸ್ಟೇಬಲ್ ಹಂತದವರೆಗಿನ ಸಿಬ್ಬಂದಿ ಸೇರಿದ್ದಾರೆ. ಪ್ರಮುಖವಾಗಿ:

ಡಾ. ಸುಮನ್ ಡಿ. ಪೆನ್ನೇಕರ್ (ಎಸ್ಪಿ, ಬಳ್ಳಾರಿ ಜಿಲ್ಲೆ)

ಡಾ. ಅರುಣ್ ಕೆ. (ಎಸ್ಪಿ, ಉಡುಪಿ ಜಿಲ್ಲೆ)

ಪ್ರತೀಕ್ ಶಂಕರ್ (ಎಸ್ಪಿ, ಯಾದಗಿರಿ ಜಿಲ್ಲೆ)

ಡಾ. ಗೋಪಾಲ ಎಂ. ಬ್ಯಾಕೋಡ (ಡಿಸಿಪಿ, ಸಂಚಾರ ದಕ್ಷಿಣ ವಿಭಾಗ, ಬೆಂಗಳೂರು) ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಒಟ್ಟು 153 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸರ್ಕಾರ ಈ ಗೌರವಕ್ಕೆ ಆಯ್ಕೆ ಮಾಡಿದೆ.

ಏಪ್ರಿಲ್ 2ರಂದು ಪದಕ ಪ್ರದಾನ ಸಮಾರಂಭ:
ಪದಕ ಪುರಸ್ಕೃತರಿಗೆ ಏಪ್ರಿಲ್ 02, 2026 ರಂದು ನಡೆಯುವ ವಿಶೇಷ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮದ ತಾಲೀಮು ಮತ್ತು ನಿಯಮಗಳು:

ಪೂರ್ವಭಾವಿ ತಾಲೀಮು: ಪದಕ ಪ್ರದಾನ ಸಮಾರಂಭದ ಹಿನ್ನೆಲೆಯಲ್ಲಿ ಮಾರ್ಚ್ 29, 2026 ರಿಂದಲೇ ಪೂರ್ವಭಾವಿ ತಾಲೀಮು (ರಿಹರ್ಸಲ್) ನಡೆಯಲಿದೆ. ಆಯ್ಕೆಯಾದ ಎಲ್ಲಾ 153 ಸಿಬ್ಬಂದಿಗಳು ಮಾ.29ರ ಬೆಳಗ್ಗೆ 8:00 ಗಂಟೆಗೆ ಕೋರಮಂಗಲದ ಕೆಎಸ್ಆರ್ಪಿ 3ನೇ ಪಡೆಯ ಕಮಾಂಡೆಂಟ್ ಎದುರು ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಕಡ್ಡಾಯ ಹಾಜರಾತಿ: ತಾಲೀಮಿನಲ್ಲಿ ಭಾಗವಹಿಸದೇ ಇರುವ ಅಧಿಕಾರಿ ಮತ್ತು ಸಿಬ್ಬಂದಿಗೆ ನಿಗದಿಪಡಿಸಿದ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಮವಸ್ತ್ರ ಸಂಹಿತೆ: ಡಿವೈಎಸ್ಪಿ ಮತ್ತು ಮೇಲ್ಪಟ್ಟ ಅಧಿಕಾರಿಗಳು ‘ವರ್ಕಿಂಗ್ ಡ್ರೆಸ್’ ಜೊತೆಗೆ ಕ್ರಾಸ್ ಬೆಲ್ಟ್ ಹಾಗೂ ಕತ್ತಿ (Sword) ಧರಿಸಬೇಕು. ಸಿಪಿಐ ನಿಂದ ಎಎಸ್ಐ ವರೆಗಿನ ಅಧಿಕಾರಿಗಳು ‘ವರ್ಕಿಂಗ್ ಡ್ರೆಸ್’ ಜೊತೆಗೆ ಕ್ರಾಸ್ ಬೆಲ್ಟ್ ಹಾಗೂ ಮುಖ್ಯ ಕಾನ್ಸ್ಟೇಬಲ್ (HC) ಮತ್ತು ಕಾನ್ಸ್ಟೇಬಲ್ (PC) ಹಂತದ ಸಿಬ್ಬಂದಿ ‘ಸೆರಿಮೋನಿಯಲ್ ಡ್ರೆಸ್’ ಧರಿಸುವಂತೆ ನಿರ್ದೇಶನ ನೀಡಲಾಗಿದೆ.

ಒಂದು ವೇಳೆ ಆಯ್ಕೆಯಾದ ಅಧಿಕಾರಿ/ಸಿಬ್ಬಂದಿಗಳಲ್ಲಿ ಯಾರಾದರೂ ಪ್ರಸ್ತುತ ಅಮಾನತ್ತಿನಲ್ಲಿದ್ದರೆ ಅಂತಹವರಿಗೆ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ. ನಿವೃತ್ತರಾಗಿದ್ದರೂ ಅಥವಾ ಮರಣ ಹೊಂದಿದ್ದರೂ ಅವರಿಗೆ/ಅವರ ಕುಟುಂಬದವರಿಗೆ ಈ ಗೌರವವನ್ನು ತಲುಪಿಸುವ ಜವಾಬ್ದಾರಿಯನ್ನು ಆಯಾ ಘಟಕಾಧಿಕಾರಿಗಳಿಗೆ ವಹಿಸಲಾಗಿದೆ.

 

BREAKING: 2025 'Chief Minister's Police Medal' announced: 153 officers and personnel of the state honored!
Share. Facebook Twitter LinkedIn WhatsApp Email

Related Posts

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

30/04/2026 11:06 AM1 Min Read

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM1 Min Read

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM1 Min Read
Recent News

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

30/04/2026 11:06 AM

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM

ಭಾರತದ ನಕ್ಷೆ ತಿರುಚಿದ ನೇಪಾಳ ಏರ್‌ಲೈನ್ಸ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಸಂಸ್ಥೆ!

30/04/2026 10:45 AM
State News
KARNATAKA

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

By kannadanewsnow0530/04/2026 11:06 AM KARNATAKA 1 Min Read

ಬೆಂಗಳೂರು : ನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದುರ್ಮರಣಕ್ಕೀಡಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ…

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.