ಹಾಸನ : ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಪುಟ್ಟ ಮಕ್ಕಳೇ ಈ ಮಾರಕ ಜ್ವರಕ್ಕೆ ಬಲಿಯಾಗುತ್ತಿದ್ದು, ಇದೀಗ 23 ವರ್ಷದ ಯುವತಿಯೊಬ್ಬರು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆಗೆ ತಾಲೂಕಿನ ಮುದುಡಿ ತಾಂಡದ ನಿವಾಸಿ ಸುಪ್ರೀತಾ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹಾಸನದಲ್ಲಿ ನಿರಂತರವಾಗಿ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ನಿಂತ ನೀರಿನ ಮಳೆಯೆಯಿಂದ ಸೊಳ್ಳೆಗಳು ಹೆಚ್ಚಾಗಿ ಈ ಒಂದು ಡೇಂಗು ಸೋಂಕು ಹೆಚ್ಚಳವಾಗುತ್ತಿದೆ ಎಂದು ತಿಳಿದು ಬಂದಿದೆ. ಆರೋಗ್ಯ ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರು ಕೂಡ ಜನರು ಎಚ್ಚೆತ್ತುಕೊಳ್ಳದೆ ಇರುವುದರಿಂದ ಇಂತಹ ಅನಾಹುತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.