ಬೆಂಗಳೂರು : ವಿಚ್ಚೆದಿತ ಪತಿ ಜೊತೆಗೆ ಮಗು ಸೇರಬಾರದು ಎಂಬು ಉದ್ದೇಶದಿಂದ 4 ವರ್ಷದ ಕಂದಮ್ಮನನ್ನೇ ತಾಯಿ ಸುಚನಾ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ತಂದೆ ವೆಂಕಟರಮಣ ಸಕಲ ವಿಧಿ ವಿಧಾನಗಳಿಂದ ನೆರವೇರಿಸಿದ್ದಾರೆ.

ನಿನ್ನೆ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನೆರವೇರಿಸಲಾಗಿದ್ದು ನಂತರ ಮಧ್ಯರಾತ್ರಿ ಒಂದು ಮೂವತ್ತಕ್ಕೆ ಆಂಬುಲೆನ್ಸ್ ಮುಖಾಂತರ ಯಶವಂತಪುರದ ಬ್ರಿಗೇಡ್ ಗೇಟ್ ಬಳಿ ಇರುವ ವೆಂಕಟರಮಣ ನಿವಾಸಕ್ಕೆ ಮಗುವಿನ ಮೃತದೇಹ ರವಾನಿಸಲಾಗಿತ್ತು ಈ ವೇಳೆ ಮಗುವಿನ ತಂದೆ ವೆಂಕಟರಮಣ ಅವರು ಕಾರಿನಲ್ಲಿ ಆಂಬುಲೆನ್ಸ್ ಅನ್ನು ಹಿಂಬಾಲಿಸಿಕೊಂಡು ಬಂದಿದ್ದರು.

ಇದೀಗ ನಿವಾಸದಿಂದ ಎಂಬುಲೆನ್ಸ್ ಮುಖಾಂತರ ಹರೀಶ್ ಚಂದ್ರಘಾಟಿಗೆ ಯಶವಂತಪುರ ಅಪಾರ್ಟ್ಮೆಂಟ್ ಇಂದ ಮೃತ ದೇಹ ಶಿಫ್ಟ್ ಆಗಿದ್ದು ಚಿನ್ಮಯ್ ತಂದೆ ವೆಂಕಟರಮಣ ಅವರು ಸಕಲ ವಿಧಿ ವಿಧಾನಗಳಿಂದ ಮಗು ಚಿನ್ಮಯ್ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ.

ಈಗಾಗಲೇ ಆರು ದಿನಗಳವರೆಗೆ ಕೊಲೆ ಪಾತಕಿ ತಾಯಿ ಸುಚನಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಗೋವಾಗೆ ಕರೆದುಕೊಂಡು ಹೋಗಿ ಅಲ್ಲಿನ ಪೊಲೀಸ್ ಅಧಿಕಾರಿಗಳು ಘಟನೆ ನಡೆದಿರುವಂತಹ ಅಪಾರ್ಟ್ಮೆಂಟ್ ನಲ್ಲಿ ಸ್ಥಳ ಮಹಜರು ನಡೆಸಲಿದ್ದಾರೆ.

Share.
Exit mobile version