ರಾಯಚೂರು : ರಾಯಚೂರಿನಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು 5 ಕುರಿಗಳು ಸಾವನ್ನಪ್ಪಿವೆ. ಆದರೆ ಅದೃಷ್ಟವಶಾತ್ ಶೆಡ್ ನಲ್ಲಿ ಇದ್ದಂತಹ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಯಚೂರಿನ ಏಗನೂರು ಗ್ರಾಮದಲ್ಲಿ ನಡೆದಿದೆ.
ಏಗನೂರು ಗ್ರಾಮದ ನರಸಿಂಹಲು ಎಂಬವರು ವಾಸಿಸುವ ಟಿನ್ ಶೆಡ್ನಲ್ಲಿ ಘಟನೆ ಸಂಭವಿಸಿದೆ. ಗುಡಿಸಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕುರಿಗಳು ಜೀವಂತವಾಗಿ ಮೃತಪಟ್ಟಿವೆ. 40 ಸಾವಿರ ರೂ ನಗದು, 5 ಗ್ರಾಂ ಚಿನ್ನದ ಕಿವಿಯೋಲೆ, ಬೆಳ್ಳಿಯ ಕಾಲ್ಗೆಜ್ಜೆ, ದವಸ-ಧಾನ್ಯಗಳು ಸುಟ್ಟು ಕರಕಲಾಗಿವೆ. ಶೆಡ್ನಲ್ಲೇ ಇದ್ದ ನರಸಿಂಹಲು ಹಾಗೂ ಪತ್ನಿ ಪಾರಾಗಿದ್ದಾರೆ. ಕೊಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.