ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ 7 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇವಬತ್ತುಲ ಬೂರಯ್ಯ (40), ಸಮಿಶ್ರಗುಡೆಂ ಮಂಡಲದ ತಾಡಿಮಲ್ಲದ ತಮ್ಮಿರೆಡ್ಡಿ ಸತ್ಯನಾರಾಯಣ (45), ಪಿ. ಘಟನೆಯಲ್ಲಿ ನಿಡದವೋಲು ಮಂಡಲದ ಕಟಕೋಟೇಶ್ವರದ ಚಿನಮುಸಲಯ್ಯ (35), ಕಟ್ಟವ್ವ ಋಷ್ಣ (40), ಕಟ್ಟವ್ವ ಸತ್ತಿಪಂಡು (40), ತಾಡಿ ಕೃಷ್ಣ (45) ಹಾಗೂ ಬೊಕ್ಕ ಪ್ರಸಾದ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಪೈಕಿ 6 ಮಂದಿ ಕಾರ್ಮಿಕರು ತಾಡಿಮಳ್ಳ ಗ್ರಾಮದವರು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.