ಬೆಂಗಳೂರು : ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಯ ಪರಿಣಾಮ ಕಾಡುಗೋಡಿಯಲ್ಲಿ ಸುಹಾಸ್ ಗೌಡ (7) ಎನ್ನುವ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಲಿಫ್ಟ್ ನಿರ್ಮಾಣಕ್ಕೆ ಅಗದಿದ್ದ ನೀರಿನ ಗುಂಡಿಗೆ ಬಿದ್ದು ದುರಂತ ಸಂಭವಿಸಿದೆ. ಆಟವಾಡುವಾಗುವ ನೀರಿನ ಗುಂಡಿಗೆ ಬಿದ್ದು ಸುಹಾಸ್ ಗೌಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕೊಡುತಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.