ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದಾಗ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ರಾಜ್ಯದ ಮೂವರು ಸ್ಥಳದಲ್ಲೇ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಎಂಟು ಮಂದಿಗೆ ಗಂಭೀರವಾದ ಗಾಯಗಳಾಗಿವೆ. ಆಂಧ್ರಪ್ರದೇಶದ ಮದನಪಲ್ಲಿ ಬಳಿ ಟಿಟಿ ವಾಹನ ಡಿಕ್ಕಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ 3 ಸಾವನ್ನಪ್ಪಿದ್ದಾರೆ ಉಳಿದ ಎಂಟು ಜನರುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಒಂದು ಅಪಘಾತದಲ್ಲಿ ರಾಜ್ಯದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ ಟಿಟಿ ವಾಹನದಲ್ಲಿದ್ದ ಮೇಘರ್ಷ (17) ಚರಣ್ (17) ಹಾಗೂ ಶ್ರಾವಣಿ ಸಾವನಪ್ಪಿದ್ದಾರೆ.ಮೃತರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗ್ರಾಮದವರು ಎಂದು ತಿಳಿದುಬಂದಿದೆ. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.