ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಸಾಂಬಾರ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಆಗಿ, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ತಲಘಟ್ಟಪುರದಲ್ಲಿ ತಡರಾತ್ರಿ ಈ ಒಂದು ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿ ನೇಪಾಳ ಮೂಲದ ಬಹದ್ದೂರ್ ಎಂದು ತಿಳಿದುಬಂದಿದೆ.
ಬಹದ್ದೂರ್ ಸ್ನೇಹಿತ ಮಹೇಂದ್ರ ಸಾಂಬಾರ್ ಮಾಡುವ ವಿಚಾರವಾಗಿ ಕೊಲೆಗೈದಿದ್ದಾನೆ. ನಿನ್ನೆ ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಬಹದ್ದೂರ್ ಮೇಲೆ ಹಲ್ಲೆಗದು ಮಹೇಂದ್ರ ಕೊಂದಿದ್ದಾನೆ. ಸೆಕ್ಯೂರಿಟಿ ಕಾರ್ಡ್ ಆಗಿ ಬಹದ್ದೂರ್ ಕೆಲಸ ಮಾಡುತ್ತಿದ್ದ. ಕೆಲವು ವರ್ಷಗಳಿಂದ ಬಹದ್ದೂರ್ ಬೆಂಗಳೂರಿನಲ್ಲಿಯೇ ವಾಸವಿದ್ದ. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.