ಉತ್ತರಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ನದಿ ಹಳ್ಳಕೊಳ್ಳಲು ತುಂಬಿ ಹರಿಯುತ್ತಿವೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಒಟ್ಟು 9 ಜನರು ಜಲ ಸಮಾಧಿ ಆಗಿದ್ದದ್ದಾರೆ. ಇದರ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಫಾಲ್ಸ್ ನೋಡಲು ಬಂದಿದ್ದ ಯುವಕ ಕಾಲು ಜಾರಿ ಹಳ್ಳಕ್ಕೆ ಬಿದ್ದು ನಿರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ಎಂದು ಗುರುತಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತಕ್ಕೆ ಸ್ನೇಹಿತ ವಾಸುದೇವ್ ಜೊತೆ ಪವನ್ ನಿನ್ನೆ ಸಂಜೆ ತೆರಳಿದ್ದಾನೆ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ನಾಪತ್ತೆಯಾದ ಯುವಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.