ಮಂಗಳೂರು : ಮಂಗಳೂರಿನಿಂದ ಲಕ್ಷ ದೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದ್ದು, ಸರಕು ತುಂಬಿದ್ದ ಮಂಗಳೂರಿನ ಹಡಗು ಇದೀಗ ಮುಳುಗಡೆಯಾಗಿದೆ. MSV ಸಲಾಮತ್ ಎಂಬ ಹೆಸರಿನ ಹಡಗು, ಮಂಗಳೂರಿನಿಂದ ಲಕ್ಷ ದೀಪಕ್ಕೆ ತೆರಳುವಾಗ ಸಮುದ್ರದಲ್ಲಿ ಮುಳುಗಡೆಯಾಗಿದೆ. ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಹಡಗು ಮುಳುಗಿದೆ.
ಮೇ 12 ರಂದು ಮಂಗಳೂರು ಬಂದರಿನಿಂದ ಈ ಒಂದು ಹಡಗು ಲಕ್ಷದ್ವೀಪದ ಕಡೆಗೆ ಹೊರಟಿತ್ತು. ತಾಂತ್ರಿಕ ಸಮಸ್ಯೆಯಿಂದ ನೀರು ನುಗ್ಗಿ ಹಡಗು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಈ ವೇಳೆ ಹಡಗಿನಿಂದ ಹಾರಿ 6 ಸಿಬ್ಬಂದಿಗಳು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಡಿಂಗಿ ಬೋಟ್ ಮೂಲಕ ಸಿಬ್ಬಂದಿಗಳು ಪ್ರಾಣ ಉಳಿಸಿಕೊಂಡಿದ್ದಾರೆ.
ಕರಾವಳಿ ರಕ್ಷಣಾಪಡಿಗೆ ಬಂದ ಮಾಹಿತಿ ಹಿನ್ನೆಲೆಯಲ್ಲಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಪೋಸ್ಟ್ ಕಾರ್ಡ್ ವಿಕ್ರಂ ಚಿಕ್ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಸ್ಮಾಯಿಲ್ ಶರೀಫ್ ಅಲೆಮನ್, ಅಹಮದ್ ಭಾಯ್, ಸುಲೇಮಾನ್ ಇಸ್ಮಾಯಿಲ್, ಕಸಮ ಇಸ್ಮಾಯಿಲ್, ಅಕ್ಬರ್ ಅಬ್ದುಲ್ ಸುರಾನಿ ಮತ್ತು ಅಜ್ಮಲ್ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ.