ಬಾಗಲಕೋಟೆ : ಯುಗಾದಿ ಹಬ್ಬದ ದಿನವೇ ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17) , ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ.
ಮೂವರು ಬಾಲಕರ ಪೈಕಿ ಸೋಮಶೇಖರ್ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಮೃತ ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದ ನಿವಾಸಿಗಳು, ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.