ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಇದೀಗ ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವನಪ್ಪಿದ್ದಾನೆ.
ಹೌದು ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಕಿರುಕುಂಬಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಮಾದೇಶ್ (16) ಸಾವನ್ನಪ್ಪಿದ್ದಾನೆ. ಡ್ರೈನೇಜ್ ಪೈಪ್ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಈ ಒಂದು ದುರಂತ ಸಂಭವಿಸಿದೆ. ಪೈಪ್ನಲ್ಲಿ ಸಿಲುಕಿದ್ದ ಕಂಬಿಯನ್ನು ಹೊರಗೆ ಎಳೆಯುತ್ತಿದ್ದಾಗ, ಕಬ್ಬಿಣದ ಕಂಬಿ ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಮಾದೇಶ್ ಸಾವನ್ನಪ್ಪಿದ್ದಾನೆ. ನಿನ್ನೆಯಷ್ಟೇ ಮಾದೇಶ್ SSLC ಮರು ಪರೀಕ್ಷೆ ಬರೆದು ಬಂದಿದ್ದ. ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.